Sunday, June 29, 2025
Homeಪ್ರಮುಖ-ಸುದ್ದಿತಾನು ಫೇಮಸ್ ಆಗ್ಬೇಕು ಅಂತಾ ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದ ಆರೋಪಿ

ತಾನು ಫೇಮಸ್ ಆಗ್ಬೇಕು ಅಂತಾ ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದ ಆರೋಪಿ

spot_img
- Advertisement -
- Advertisement -

ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ಪ್ರಚಾರ ಪಡೆಯುವ ಉದ್ದೇಶದಿಂದ ಈತ ಹುಸಿಬಾಂಬ್ ಕರೆ ಮಾಡಿದ್ದ ಎಂದು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆಯುಕ್ತರು, ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ದಿನ ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಮುದ್ರಾಡಿಯ ಪೊಯ್ಯದಲ್ ಬಲ್ಲಾಡಿ ನಿವಾಸಿ ವಸಂತ ಕೃಷ್ಣ ಶೇರಿಗಾರ ಎಂಬ ಆರೋಪಿಯನ್ನು ಬಂಧಿಸಲಾಗಿದೆ ಎಂದರು.

ಇದೇ ವರ್ಷದ ಜನವರಿಯಲ್ಲಿ ನಡೆದ ಬಾಂಬ್ ಇರಿಸಿದ್ದ ಪ್ರಕರಣದಲ್ಲಿ ಆರೋಪಿಗೆ ಸಿಕ್ಕ ಪ್ರಚಾರದಿಂದ ಪ್ರೇರೆಪಿತನಾಗಿ, ತಾನು ಕೂಡಾ ಪ್ರಸಿದ್ಧನಾಗಬೇಕೆಂದು ಬಜಪೆ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದ ಎಂದು ಆರೋಪಿ ವಸಂತ ಕೃಷ್ಣ ಶೇರಿಗಾರ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ ಎಂದು ಆಯುಕ್ತರು ಹೇಳಿದ್ದಾರೆ.

ಕಾರ್ಕಳದ ಮುದ್ರಾಡಿಯವನಾದ ಈತ ಬೆಂಗಳೂರಿನಲ್ಲಿ ಹೋಟೆಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದ. ಇತ್ತೀಚೆಗೆ ಊರಿಗೆ ಬಂದಿದ್ದ ಈತ ಸದ್ಯ ಉಡುಪಿಯ ಹೊಟೇಲೊಂದರಲ್ಲಿ ಕೆಲಸಕ್ಕಿದ್ದ.

ಇನ್ನು ವಿಮಾನ ನಿಲ್ದಾಣಕ್ಕೆ ಕರೆ ಮಾಡುವ ಉದ್ದೇಶದಿಂದ ಗೂಗಲ್ ಮೂಲಕ ವಿಮಾನ ನಿಲ್ದಾಣದ ಮಾಜಿ ನಿರ್ದೇಶಕ ಎಂ. ಆರ್ ವಾಸುದೇವ ಅವರ ಮೊಬೈಲ್ ಸಂಖ್ಯೆಯನ್ನು ಪಡೆದುಕೊಂಡಿದ್ದ. ನಂತರ ಆ ಸಂಖ್ಯೆಗೆ “ಏರ್ ಪೋರ್ಟ್ ನಲ್ಲಿ ಬಾಂಬ್ ಇದೆ” ಎಂದು ಎಸ್‌ಎಂಎಸ್ ಮಾಡಿದ್ದ. ಇದಾದ ಕೆಲವೇ ಸಮಯದಲ್ಲಿ ಕರೆ ಮಾಡಿ ಕನ್ನಡದಲ್ಲೇ ಮಾತನಾಡಿದ್ದ. ಕೂಡಲೇ ಏರ್ ಪೋರ್ಟ್ ಸಿಬ್ಬಂದಿ ಕಾರ್ಯಾಚರಣೆ ನಡೆಸಿದಾಗ ಇದೊಂದು ಹುಸಿ ಬಾಂಬ್ ಕರೆ ಎಂದು ತಿಳಿದು ಬಂದಿತ್ತು.

ಈ ಕುರಿತು ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮೊಬೈಲ್ ನಂಬರ್ ಆಧಾರದಲ್ಲಿ ತನಿಖೆಗೆ ಇಳಿದ ಮಂಗಳೂರು ನಗರ, ಉಡುಪಿ ಜಿಲ್ಲಾ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಅದೇ ದಿನ ಆರೋಪಿಯನ್ನು ಬಂಧಿಸಿದ್ದರು.

- Advertisement -
spot_img

Latest News

error: Content is protected !!