- Advertisement -
- Advertisement -
ಬಂಟ್ವಾಳ: ಸಿದ್ದರಾಮಯ್ಯ ಸರ್ಕಾರ ಮಹಿಳೆಯಿರಿಗೆ ಫ್ರೀ ಪ್ರಯಾಣದ ಅವಕಾಶ ಕಲ್ಪಿಸಿದ್ದೇ ತಡ. ಕರಾವಳಿಯತ್ತ ಮಹಿಳಾ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಅದರಲ್ಲೂ ಪುಣ್ಯಕ್ಷೇತ್ರಗಳಂತೂ ಮಹಿಳಾ ಮಣಿಗಳಿಂದ ತುಂಬಿ ತುಳುಕುತ್ತಿದೆ. ಬಸ್ ನಲ್ಲೂ ಅವರದ್ದೇ ದರ್ಬಾರ್. ಇದೆಲ್ಲಾ ಇರ್ಲಿ ಬಿಡಿ.. ಆದರೆ ಕೆಲವು ಮಹಿಳೆಯರು ಎಲ್ಲರಿಗಿಂತ ಒಂದು ಹೆಜ್ಜೆ ಮುಂದೆ ಹೋಗಿದ್ದಾರೆ.
ವಾಯುವ್ಯ ಕರ್ನಾಟಕ ಸಾರಿಗೆ ಬಸ್ ನಲ್ಲಿ ಪ್ರಯಾಣಿಸುವ ವೇಳೆ ಕಿಟಕಿಯ ಸರಳಿನಲ್ಲೇ ಬಟ್ಟೆ ಒಣ ಹಾಕಿದ್ದಾರೆ. ಸುಬ್ರಹ್ಮಣ್ಯದಿಂದ ಕಾರವಾರಕ್ಕೆ ಪ್ರಯಾಣಿಸುವ ಬಸ್ ನಲ್ಲಿ ಈ ದೃಶ್ಯ ಕಂಡು ಬಂದಿದ್ದು, ಬಸ್ ನಲ್ಲಿದ್ದ ಇತರೆ ಪ್ರಯಾಣಿಕರು ಮುಜುಗರ ಅನುಭವಿಸುವಂತಾಗಿದೆ. ಅಲ್ಲದೇ ಸಾರ್ವಜನಿಕರಿಂದಲೂ ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.
- Advertisement -