- Advertisement -
- Advertisement -
ಕಾರ್ಕಳ : ಅನಾರೋಗ್ಯವೆಂದು ಡೆತ್ ನೋಟ್ ಬರೆದಿಟ್ಟು ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಂಡ್ಕೂರು ಜಾರಿಗೆಕಟ್ಟೆಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಲಾರೆನ್ಸ್ ಕುಟಿನ್ಹೋರವರ ಪತ್ನಿ ಸಿಂತಿಯಾ(40) ಎಂದು ಗುರುತಿಸಲಾಗಿದೆ. ಆರೋಗ್ಯ ಸರಿ ಇಲ್ಲ ಎಂದು ಡೆತ್ ನೋಟ್ ಬರೆದು ಶುಕ್ರವಾರ ಬೆಳಿಗ್ಗೆ ಸುಮಾರು 7ರ ಸುಮಾರಿಗೆ ಮನೆ ತೋಟದ ಬಾವಿಗೆ ಹಾರಿದ್ದಾರೆ. ಇವರಿಗೆ ಇಬ್ಬರು ಪುತ್ರಿಯರಿದ್ದು, ಕೃಷಿ ಕುಟುಂಬ ಎಂದು ವರದಿಯಾಗಿದೆ.
ಈ ಸಂಬಂಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -