Tuesday, April 30, 2024
Homeಕರಾವಳಿಬಂಟ್ವಾಳದಲ್ಲಿ ಮಹಿಳೆಯೊಬ್ಬರ ಆತ್ಮಹತ್ಯೆ ಪ್ರಕರಣ; ಸಾವಿನ ಬಗ್ಗೆ ಸಂದೇಹ ವ್ಯಕ್ತ ಪಡಿಸಿ ಪತಿಯಿಂದ ದಕ್ಷಿಣಕನ್ನಡ ಎಸ್ಪಿಗೆ...

ಬಂಟ್ವಾಳದಲ್ಲಿ ಮಹಿಳೆಯೊಬ್ಬರ ಆತ್ಮಹತ್ಯೆ ಪ್ರಕರಣ; ಸಾವಿನ ಬಗ್ಗೆ ಸಂದೇಹ ವ್ಯಕ್ತ ಪಡಿಸಿ ಪತಿಯಿಂದ ದಕ್ಷಿಣಕನ್ನಡ ಎಸ್ಪಿಗೆ ದೂರು

spot_img
- Advertisement -
- Advertisement -

ಬಂಟ್ವಾಳ: ಇಲ್ಲಿನ ಸಜೀಪಪಡು ಗ್ರಾಮದ ಸೇನರಬೆಟ್ಟುನಲ್ಲಿ ಮಹಿಳೆಯೊಬ್ಬರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಿಳೆಯ ಸಾವಿನ ಬಗ್ಗೆ ಮಹಿಳೆಯ ಪತಿ ಸಂದೇಹ ವ್ಯಕ್ತಪಡಿಸಿದ್ದು ಈ ಬಗ್ಗೆ ತನಿಖೆಗೆ  ದ.ಕ.ಎಸ್ಪಿಗೆ ದೂರು ನೀಡಿದ್ದಾರೆ

ಸೇನರಬೆಟ್ಟು ನಿವಾಸಿ ಸತೀಶ್‌ ಪಿ. ಅವರ ಪತ್ನಿ ಬೀನಾ ಸಿ. ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಯ ಸಂದರ್ಭ ಮಹಿಳೆಯ ಕಿವಿಯಲ್ಲಿ ಇಯರ್‌ ಫೋನ್‌ ಇದ್ದು, ಆಕೆಯ ಮೊಬೈಲ್‌ ಕೆಳಗಡೆ ಬಿದ್ದುಕೊಂಡಿತ್ತು. ಹೀಗಾಗಿ ಅದು ವ್ಯವಸ್ಥಿತ ಸಂಚು ಎಂಬ ಸಂಶಯ ಮೂಡುತ್ತಿದೆ.

ಮಂಗಳೂರಿನಲ್ಲಿ ಕೆಲಸಕ್ಕಿದ್ದ ತಾನು ವಾರಕ್ಕೊಮ್ಮೆ ಮನೆಗೆ ಹೋಗುತ್ತಿದ್ದೆ. ಈ ವೇಳೆ ಯುವಕನೋರ್ವ ಮನೆಗೆ ಬಂದು ಹೋಗುತ್ತಿದ್ದು, ಆತನೇ ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರೇರಣೆ ನೀಡಿದ್ದಾನೆ ಎಂದು ದೂರು ನೀಡಿದ್ದಾರೆ.

ಜತೆಗೆ ಘಟನೆಯ ಕೆಲವು ದಿನಗಳ ಹಿಂದೆ ತನ್ನ ಪತ್ನಿಯ ತಾಯಿಗೆ ಕರೆ ಮಾಡಿ ಬೀನಾ ಆತ್ಮಹತ್ಯೆಗೆ ಯತ್ನಿಸಿರುವುದಾಗಿ ಹೇಳಿದ್ದ. ಈ ವೇಳೆ ಆಕೆಯನ್ನು ವಿಚಾರಿಸಿದಾಗ ಯುವಕ ಕಿರುಕುಳ ನೀಡುವ ವಿಚಾರವನ್ನು ತಾಯಿಯ ಬಳಿ ಹೇಳಿಕೊಂಡಿದ್ದಳು. ಘಟನೆ ನಡೆದ ದಿನವೂ ತನ್ನ ಪತ್ನಿಯ ತಾಯಿಗೆ ಕರೆ ಮಾಡಿ ಬೀನಾ ಆತ್ಮಹತ್ಯೆಯ ವಿಚಾರ ಹೇಳಿದ್ದಾನೆ ಎಂದು ಮೃತ ಮಹಿಳೆಯ ಪತಿ ಸತೀಶ್‌ ಅವರು ಎಸ್‌ಪಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

- Advertisement -
spot_img

Latest News

error: Content is protected !!