Friday, May 17, 2024
Homeಕರಾವಳಿಪುತ್ತೂರು; ಮಗ ಅಪಘಾತದಲ್ಲಿ‌ ಗಾಯಗೊಂಡು  ಆಸ್ಪತ್ರೆಗೆ ದಾಖಲು; ನೊಂದ ತಾಯಿ ಆತ್ಮಹತ್ಯೆಗೆ ಶರಣು

ಪುತ್ತೂರು; ಮಗ ಅಪಘಾತದಲ್ಲಿ‌ ಗಾಯಗೊಂಡು  ಆಸ್ಪತ್ರೆಗೆ ದಾಖಲು; ನೊಂದ ತಾಯಿ ಆತ್ಮಹತ್ಯೆಗೆ ಶರಣು

spot_img
- Advertisement -
- Advertisement -

ಪುತ್ತೂರು: ಮಗ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದ್ದರಿಂದ ತಾಯಿ  ನೊಂದು  ಆತ್ಮಹತ್ಯೆಗೆ ಶರಣಾದ ಘಟನೆ ಪುರುಷರಕಟ್ಟೆಯ ಇಂದಿರಾನಗರದಲ್ಲಿ ನಡೆದಿದೆ.

ಇಂದಿರಾನಗರದ ದಿ| ಪ್ರವೀಣ್‌ ಅವರ ಪತ್ನಿ ಕಾವ್ಯಾ (38) ಆತ್ಮಹತ್ಯೆ ಮಾಡಿಕೊಂಡವರು. ಪತಿ ಪ್ರವೀಣ್‌  7 ವರ್ಷಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು.  ಅದೇ ಸ್ಥಳದಲ್ಲಿ ಕಾವ್ಯಾ ಆತಹತ್ಯೆ ಮಾಡಿಕೊಂಡಿದ್ದಾರೆ.

ಕಾವ್ಯಾ ಅವರ ಪುತ್ರ ಪ್ರತೀಕ್‌ ಜೂ. 30ರಂದು ಬೆದ್ರಾಳ ಸಮೀಪ ಸಂಭವಿಸಿದ ಅಪಘಾತವೊಂದರಲ್ಲಿ ತೀವ್ರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇದರ ಬೆನ್ನಲ್ಲೇ ಕಾವ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಅಪ್ಪ ಅಮ್ಮನ ಅಗಲಿಕೆಯಿಂದ ಇದೀಗ ಮಕ್ಕಳು ಅನಾಥರಾಗಿದ್ದಾರೆ.

- Advertisement -
spot_img

Latest News

error: Content is protected !!