Sunday, June 7, 2026
HomeUncategorizedಬಂಟ್ವಾಳ: ವಗ್ಗ ಸಮೀಪ ಭೀಕರ ಅಪಘಾತ, ಮಹಿಳೆ ಸಾವು : ಗಾಯಾಳುಗಳ ಅರೋಗ್ಯ ವಿಚಾರಿಸಿದ ಶಾಸಕ...

ಬಂಟ್ವಾಳ: ವಗ್ಗ ಸಮೀಪ ಭೀಕರ ಅಪಘಾತ, ಮಹಿಳೆ ಸಾವು : ಗಾಯಾಳುಗಳ ಅರೋಗ್ಯ ವಿಚಾರಿಸಿದ ಶಾಸಕ ರಾಜೇಶ್ ನಾಯ್ಕ್

- Advertisement -
- Advertisement -

ಬಂಟ್ವಾಳ: ತಾಲೂಕಿನ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ಕಾರು ಮತ್ತು ರಿಕ್ಷಾ  ನಡುವೆ ನಡೆದ ಅಪಘಾತದಲ್ಲಿ ಓರ್ವ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು ಇನ್ನುಳಿದಂತೆ ರಿಕ್ಷಾದಲ್ಲಿ ಮಕ್ಕಳು ಸಹಿತ ಎಂಟು ಮಂದಿಗೆ ಗಾಯವಾಗಿದ್ದು ಎಲ್ಲರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನಿಂದ ಪುಂಜಾಲಕಟ್ಟೆ ಕಡೆಗೆ ಬರುತ್ತಿದ್ದ ರಿಟ್ಜ್ ಕಾರು ಹಾಗೂ  ಆಪೆ ರಿಕ್ಷಾ ನಡುವೆ ಅಪಘಾತ ಸಂಭವಿಸಿದೆ.
ಪಂಜಿಕಲ್ಲು ಬಾಂದೊಟ್ಟು ರೆಚ್ಚಾಡಿ ಹರೀಶ್ ಎಂಬವರ ಪತ್ನಿ ತಿಲಕ (40) ಮೃತ ದುರ್ದೈವಿ.

ರಿಕ್ಷಾದಲ್ಲಿದ್ದ ಯಶಸ್ವಿನಿ, ಗೀತಾ , ರೇವತಿ, ಸರಸ್ವತಿ, ವೇದಾವತಿ, ರಾಜೀವಿ ಮತ್ತು ಮಕ್ಕಳಾದ ದಿಗಂತ್ ಹಾಗೂ ದಿಶಾನಿ ಅವರು ಗಾಯಗೊಂಡಿದ್ದಾರೆ.

  ಮದ್ವದಲ್ಲಿ ನಡೆದ ಸಂಬಂಧಿಕರ ಮನೆಗೆ ಸೀಮಂತ ಕಾರ್ಯಕ್ರಮಕ್ಕೆ  ಹೋಗಿ ವಾಪಸು ಮನೆಗೆ ಬರುತ್ತಿರುವ ಸಮಯ ಬಾಂಬಿಲದಲ್ಲಿ ಅಪಘಾತ ಸಂಭವಿಸಿದೆ.ತಿಲಕ ಅವರ ಜೊತೆ ಸಂಬಂಧಿಕರು ಪಂಜಿಕಲ್ಲುವಿನಿಂದ ನಾರಾಯಣ ಪೂಜಾರಿ ಎಂಬವರ ರಿಕ್ಷಾವನ್ನು ಬಾಡಿಗೆ ಮಾಡಿಕೊಂಡು ಹೋಗಿದ್ದರು.
  ರಿಕ್ಷಾದಲ್ಲಿ ಇದ್ದ ಎಲ್ಲರೂ ಕೂಡ ಸೀಮಂತ ಕಾರ್ಯಕ್ರಮ ಮುಗಿಸಿ ವಾಪಾಸು ಬರುತ್ತಿದ್ದರು ಎನ್ನಲಾಗಿದೆ.

ತಿಲಕ ಸ್ಥಳದಲ್ಲಿಯೇ ಮೃತಪಟ್ಟರೆ ಉಳಿದವರಿಗೆ ಗಂಭೀರವಾಗಿ ಗಾಯವಾಗಿದೆ ಎನ್ನಲಾಗಿದೆ.    ಮಂಗಳೂರಿನ ಜನಪ್ರಿಯ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳ ಆರೋಗ್ಯದ ಬಗ್ಗೆ ಮಾಹಿತಿಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು  ಆಸ್ಪತ್ರೆಯ ವೈದ್ಯಾಧಿಕಾರಿಗಳ ಬಳಿ  ವಿಚಾರಿಸಿದ್ದಾರೆ.

ಬಳಿಕ ಅಪಘಾತದಲ್ಲಿ ಮೃತರಾದ ತಿಲಕ‌ ಅವರ ಮೃತದೇಹ ಇರಿಸಲಾದ  ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಬೆಟಿ ನೀಡಿದರು.ಈ ಸಂದರ್ಭದಲ್ಲಿ ಪಂಜಿಕಲ್ಲು ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ, ಲಕ್ಮೀನಾರಾಯಣ ಗೌಡ,ಮೋಹನ್ ದಾಸ ಪೂಜಾರಿ, ಪ್ರವೀಣ್, ಕರುಣೇಂದ್ರ ಪೂಜಾರಿ, ಪ್ರಕಾಶ್ ಅಂಚನ್ ಮೊದಲಾದವರು ಉಪಸ್ಥಿತರಿದ್ದರು. ಘಟನೆಯ ಕುರಿತು  ಪಾಣೆಮಂಗಳೂರು ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!