- Advertisement -
![]()
- Advertisement -
ಉಡುಪಿ; ಕಳ್ಳತನ ಪ್ರಕರಣದಲ್ಲಿ 11 ವರ್ಷಗಳಿಂದ ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಖತರ್ನಾಕ್ ಕಳ್ಳಿಯರನ್ನು ಮಲ್ಪೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆಶಾ ಯಾನೆ ಸುಮಿತ್ರ ಕೃಷ್ಣ, ಮತ್ತು ರೇಖಾ ದಾನಪ್ಪ ಬಂಧಿತ ಕಳ್ಳಿಯರು
ಮಲ್ಪೆ ಬೀಚ್ನಲ್ಲಿ ಕಳವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ನ್ಯಾಯಾಲಯಕ್ಕೆ ಹಾಜರಾಗದೇ ಕಳೆದ 11 ವರ್ಷಗಳಿಂದ ತಲೆಮರೆಸಿಕೊಂಡಿದ್ದರು. ಇವರನ್ನು ಮಲ್ಪೆ ಪೊಲೀಸ್ ಠಾಣೆಯ ಸಿಬ್ಬಂದಿಯಾದ ಸುರೇಶ್ ಕುಮಾರ್, ವಿಶ್ವನಾಥ ಮತ್ತು ಸಿಂಚನ ಅವರು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಹೊಸ ಮನೆ ಎಂಬಲ್ಲಿ ಬಂಧಿಸಿದ್ದಾರೆ. ಆರೋಪಿಗಳನ್ನು ಸಿಜೆಎಂ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿದ್ದು ನ್ಯಾಯಾಲಯವು ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಸ್ತುತ ಅವರನ್ನು ಮಂಗಳೂರು ಕಾರಾಗೃಹಕ್ಕೆ ಕಳುಹಿಸಲಾಗಿದೆ.
- Advertisement -


