Sunday, June 29, 2025
Homeಕರಾವಳಿಪುತ್ತೂರು; ಸಾಹಿತಿ ಹಾಗೂ ಚಿಂತಕ ಲಕ್ಷ್ಮೀಶ ತೋಳ್ಪಾಡಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಗರಿ

ಪುತ್ತೂರು; ಸಾಹಿತಿ ಹಾಗೂ ಚಿಂತಕ ಲಕ್ಷ್ಮೀಶ ತೋಳ್ಪಾಡಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಗರಿ

spot_img
- Advertisement -
- Advertisement -

ಪುತ್ತೂರು; ಸಾಹಿತಿ ಹಾಗೂ ಚಿಂತಕ ಲಕ್ಷ್ಮೀಶ ತೋಳ್ಪಾಡಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. .ಲಕ್ಷ್ಮೀಶ ತೋಳ್ಪಾಡಿ ಅವರ ಮಹಾಭಾರತ ಅನುಸಂಧಾನದ ಭಾರತಯಾತ್ರೆ ಪ್ರಬಂಧಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಲೇಖಕ, ಚಿಂತಕ ಮತ್ತು ವಿದ್ವಾಂಸರು ಆಗಿರುವ ಲಕ್ಷೀಶ ತೋಳ್ಪಾಡಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಳಿಯ ಶಾಂತಿಗೋಡಿನವರು.ತುಳು ಇವರ ಆಡುಭಾಷೆಯಾಗಿದ್ದು ವೈ.ಎನ್.ಕೆ, ಗೋಪಾಲಕೃಷ್ಣ ಅಡಿಗ, ಲಂಕೇಶ್, ಕಿ.ರಂ. ನಾಗರಾಜ ಅವರ ಒಡನಾಟ ಇವರಿಗೆ ಲಭಿಸಿತ್ತು. ಹಲವು ಪತ್ರಿಕೆಗಳಲ್ಲಿ ತೋಳ್ಪಾಡಿ ಅವರ ಲೇಖನಗಳು ಪ್ರಕಟವಾಗಿವೆ. ಭಗವದ್ಗೀತೆಯ ಬಗೆಗಿನ ಮಹಾಯುದ್ದಕ್ಕೆ ಮುನ್ನಮೊದಲ ಪ್ರಕಟಿತ ಕೃತಿ. ಈ ಕೃತಿಯ ಬಗ್ಗೆ ಬಂದಿರುವ ಪತ್ರಿಕಾ ವಿಮರ್ಶೆಯಲ್ಲಿ ಆಧುನಿಕನಿಗೆ ಹೃದಯಸ್ಪರ್ಶಿಎಂಬ ಮೆಚ್ಚುಗೆ ವ್ಯಕ್ತವಾಗಿತ್ತು. ಸಂಸ್ಕೃತ, ವೇದ, ಉಪನಿಷತ್ತು ಗಳನ್ನು ಅಧ್ಯಯನ ಮಾಡಿರುವ ತೋಳ್ಪಾಡಿ ಅವರು ಹಲವು ಪತ್ರಿಕೆಗಳಲ್ಲಿ ಅಂಕಣ ಬರಹಗಾರರಾಗಿಯೂ ಸೇವೆ ಸಲ್ಲಿದ್ದಾರೆ.ಪಶ್ಚಿಮಘಟ್ಟ ಉಳಿಸಿ ಹೋರಾಟದಲ್ಲೂ ತೋಳ್ಪಾಡಿ ಅವರು ಮೂಂಚೂಣಿಯಲ್ಲಿದ್ದರು.

 

- Advertisement -
spot_img

Latest News

error: Content is protected !!