Tuesday, May 14, 2024
Homeಕರಾವಳಿಮಂಗಳೂರು: ಗುಡ್ಡ ಕುಸಿದು ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ಮಂಗಳೂರು: ಗುಡ್ಡ ಕುಸಿದು ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

spot_img
- Advertisement -
- Advertisement -

ಸುರತ್ಕಲ್‌: ಗುಡ್ಡ ಕುಸಿದು ಓರ್ವ ಸಾವನ್ನಪ್ಪಿ ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ಚೇಳೈರು ಗ್ರಾಮದ ಚೇಳೈರು ರೈಲ್ವೇ ಬ್ರಿಡ್ಜ್ ಬಳಿ ನಡೆದಿದೆ. ಓಬಲೇಶ್ವರ ಮೃತ ದುರ್ದೈವಿ.

ರೈಲ್ವೇ ಸೇತುವೆಯ ಮೇಲ್ಭಾಗದಲ್ಲಿ ಕಂಬಿಗಳನ್ನು ನೇರ ಮಾಡುತ್ತಿದ್ದಾಗ ಕಾರ್ಮಿಕರು ಕೆಳಭಾಗದಲ್ಲಿ ಗುಡ್ಡ ಅಗೆಯುತ್ತಿದ್ದರು. ಈ ವೇಳೆ ರೈಲೊಂದು ಏಕಾಏಕಿ ಬಂದ ಪರಿಣಾಮ ಭೂಮಿ ಕುಸಿದು ಗುಡ್ಡದ ಕೆಳಭಾಗದಲ್ಲಿ ಅಗೆಯುತ್ತಿದ್ದ ಕಾರ್ಮಿಕರ ಮೇಲೆ ಗುಡ್ಡ ಕುಸಿದಿದೆ.

ಈ ವೇಳೆ ಗುಡ್ಡ, ಕಾರ್ಮಿಕರಾದ ಓಬಳೇಶ್ವರಪ್ಪ, ಗೋವಿಂದಪ್ಪ, ತಿಮ್ಮಪ್ಪ, ಈರಣ್ಣ, ಸಂಜೀವ ಹಾಗೂ ಆತನ ಪತ್ನಿ ತೃಪ್ತಿ ರೇಖಾ ಅವರ ಮೇಲೆ ಬಿದ್ದಿದೆ. ಈ ಪೈಕಿ ಓಬಳೇಶ್ವರ ಮತ್ತು ಬಳ್ಳಾರಿ ಗೋವಿಂದಪ್ಪ ಅವರ ಮೈಮೇಲೆ ಹೆಚ್ಚಿನ ಪ್ರಮಾಣದ ಮಣ್ಣುಬಿದ್ದಿದೆ ಎನ್ನಲಾಗಿದೆ. ಮಣ್ಣಿನ ಅಡಿಗೆ ಬಿದ್ದಿದ್ದ ಇಬ್ಬರನ್ನೂ ಸಮೀಪದ ಖಾಸಗಿ ಆಸ್ಪತೆರೆಗ ದಾಖಲಾಗಿದ್ದು, ಈ ವೇಳೆ ಓಬಳೇಶ್ವರ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅಲ್ಲದೆ ಗೋವಿಂದಪ್ಪ ಅವರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ.

ಘಟನೆಗೆ ಸಂಬಂಧಿಸಿ ಕಾರ್ಮಿಕರಾದ ಕಿಟ್ಟರಾಜ ಅವರು ಸುರತ್ಕಲ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!