Monday, July 1, 2024
HomeUncategorizedಪುತ್ತೂರು; ಭಾರೀ ಮಳೆಗೆ ಮನೆಯ ಮೇಲೆ ಕುಸಿದ ಬರೆ; ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಪುತ್ತೂರು; ಭಾರೀ ಮಳೆಗೆ ಮನೆಯ ಮೇಲೆ ಕುಸಿದ ಬರೆ; ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

spot_img
- Advertisement -
- Advertisement -

ಪುತ್ತೂರು: ನಿನ್ನೆ ಉಳ್ಳಾಲದಲ್ಲಿ ಮನೆಯ ಮೇಲೆ ಕಾಂಪೌಂಡ್ ಗೋಡೆ ಕುಸಿದು ಸಾವನ್ನಪ್ಪಿದ ದುರಂತ ಮಾಸುವ ಮುನ್ನವೇ ಇಂತಹದ್ದೇ ಘಟನೆಯೊಂದು ಪುತ್ತೂರಿನಲ್ಲಿ ನಡೆದಿದೆ. ಆದರೆ ಅದೃಷ್ಟವಶಾತ್ ಪ್ರಾಣಾಪಾಯ ತಪ್ಪಿದೆ.

 ಭಾರೀ ಮಳೆಗೆ ಬರೆ ಮನೆಯ ಮೇಲೆ ಕುಸಿದು ಬಿದ್ದ ಘಟನೆ ಪುತ್ತೂರು ಬನ್ನೂರಿನ ಜೈನರಗುರಿ ಸಮೀಪ ನಡೆದಿದೆ. ಇಂದು ನಸುಕಿನ ಜಾವ ಇಲ್ಲಿನ ಮಜೀದ್ ಎಂಬವರ ಮನೆ ಮೇಲೆ ಬರೆ ಕುಸಿದ ಪರಿಣಾಮ ನಿದ್ದೆಯಲ್ಲಿದ್ದ ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿದ್ದರು.

ಮಜೀದ್ ಮತ್ತು ಮನೆ ಮಂದಿ ಮಕ್ಕಳು ಮಲಗಿದ್ದ ಕೊಠಡಿಯ ಮೇಲೆ ಮಣ್ಣು ಕುಸಿದ ಪರಿಣಾಮ ಮನೆಯ ಅರ್ಧ ಭಾಗ ಕುಸಿದಿತ್ತು.ಈ ವೇಳೆ ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿದ್ದರು. ತಕ್ಷಣ ಮನೆಯಲ್ಲಿದ್ದ ಉಳಿದವರು ಮಕ್ಕಳನ್ನು ಮಣ್ಣಿನಡಿಯಿಂದ ಮಕ್ಕಳನ್ನು ಹೊರ ಎಳೆದು ಅಪಾಯವನ್ನು ತಪ್ಪಿಸಿದ್ದಾರೆ. ಘಟನಾ ಸ್ಥಳಕ್ಕೆ ನಗರಸಭಾ ಸದಸ್ಯ ಪಿ ಜಿ ಜಗನ್ನಿವಾಸ ರಾವ್, ಪೌರಾಯುಕ್ತ ಮಧು ಎಸ್ ಮನೋಹರ್ ಸಹಿತ ನಗರಸಭೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ನಗರಸಭೆ ಮತ್ತು ಸ್ಥಳೀಯರು ಮಣ್ಣು ತೆರವು ಕಾರ್ಯ ಮಾಡಿದ್ದಾರೆ.

- Advertisement -
spot_img

Latest News

error: Content is protected !!