- Advertisement -
- Advertisement -
ಚಿಕ್ಕಮಗಳೂರು : ಭಾರೀ ಮಳೆಗೆ ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿತವಾಗಿ ಟ್ರಾಫಿಕ್ ಜಾಮ್ ಆಗಿ ವಾಹನ ಸವಾರರ ಪರದಾಡುವಂತಾಗಿದೆ.
ಕೊಟ್ಟಿಗೆಹಾರ, ಬಾಳೂರು, ಬಣಕಲ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರಿ ಮಳೆ ಆಗುತ್ತಿದ್ದು, ಮಳೆ ಆರ್ಭಟಕ್ಕೆ ಚಾರ್ಮಾಡಿ ಘಾಟ್ ನಲ್ಲಿ ಸಾಲು ಸಾಲು ಗುಡ್ಡ ಕುಸಿತವಾಗಿದೆ.
ಈ ವೇಳೆ ರಸ್ತೆಯ ಮೇಲೆ ಮಳೆಯ ನೀರ ನದಿಯಂತೆ ಹರಿಯುತ್ತಿದೆ. ಚಾರ್ಮಾಡಿ ಘಾಟ್ ನಲ್ಲಿ ಮಳೆ ಹಾಗೂ ಗುಡ್ಡ ಕುಸಿತದಿಂದ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ಇದರಿಂದ ಸಂಚಾರಕ್ಕೆ ತೊಂದರೆ ಉಂಟಾಗಿದ್ದು, ಕಿಲೋ ಮೀಟರ್ ವರೆಗೂ ನೂರಾರು ವಾಹನಗಳು ಸಾಲುಗಟ್ಟಿ ನಿಂತಿವೆ. ಹಬ್ಬಕ್ಕೆ ಊರಿಗೆ ಹೊರಟವರೆಲ್ಲಾ ಘಾಟ್ ನಲ್ಲೇ ಸಮಯ ಕಳೆಯುವಂತಾಗಿದೆ..
- Advertisement -