Thursday, June 26, 2025
Homeಕರಾವಳಿಸಕಲೇಶಪುರ: ರಾತ್ರಿಯೂ ಮುಂದುವರಿದ ರೈಲು ಹಳಿ ಮೇಲಿನ ಮಣ್ಣು ತೆರವು ಕಾರ್ಯಾಚರಣೆ

ಸಕಲೇಶಪುರ: ರಾತ್ರಿಯೂ ಮುಂದುವರಿದ ರೈಲು ಹಳಿ ಮೇಲಿನ ಮಣ್ಣು ತೆರವು ಕಾರ್ಯಾಚರಣೆ

spot_img
- Advertisement -
- Advertisement -

ಸಕಲೇಶಪುರ: ಮಂಗಳೂರು – ಬೆಂಗಳೂರು ರೈಲು ಮಾರ್ಗದಲ್ಲಿ ಸಕಲೇಶಪುರ ಸಮೀಪ ಹಳಿ ಮೇಲೆ ಕುಸಿದ ಮಣ್ಣು ತೆರವು ಕಾರ್ಯ ಮುಂದುವರಿದಿದೆ.

ಮಳೆಯ ನಡುವೆ ರಾತ್ರಿಯೂ ಬೆಳಕಿನ ವ್ಯವಸ್ಥೆ ಮಾಡಿಕೊಂಡು ರೈಲ್ವೇ ಇಲಾಖೆ ಅಧಿಕಾರಿಗಳು ಮಣ್ಣು ತೆರವುಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದರು.

ಮೂರ್ನಾಲ್ಕು ಹಿಟಾಚಿಗಳನ್ನು ಬಳಸಿ ಮಣ್ಣು ತೆರವು ಮಾಡಲಾಗುತ್ತಿದ್ದು, ಸಕಲೇಶಪುರ ಉಪವಿಭಾಗಾಧಿಕಾರಿ ಶೃತಿ ಈ ವೇಳೆ ಸ್ಥಳದಲ್ಲಿ ಹಾಜರಿದ್ದರು.ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡನಾಗರ ಬಳಿ ಶುಕ್ರವಾರ ರೈಲ್ವೇ ಹಳಿಯ ಮೇಲೆ ಮಣ್ಣು ಕುಸಿದಿತ್ತು.

ಒಂದು ವಾರದಲ್ಲಿ ಎರಡನೇ ಬಾರಿ ಒಂದೇ ಸ್ಥಳದಲ್ಲಿ ಹಳಿಯ ಮೇಲೆ ಮಣ್ಣು ಕುಸಿತವಾಗಿದ್ದು, ಮಂಗಳೂರು – ಬೆಂಗಳೂರು ಮಾರ್ಗದಲ್ಲಿನ‌ ರೈಲು ಸಂಚಾರ ಸ್ಥಗಿತಗೊಂಡಿತ್ತು.

- Advertisement -
spot_img

Latest News

error: Content is protected !!