- Advertisement -
- Advertisement -
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನೆಲೆಯಲ್ಲಿ ರೈಲು ಹಳಿಯ ಮೇಲೆ ಗುಡ್ಡ ಕುಸಿದಿದೆ. ಮಂಗಳೂರು ಹೊರವಲಯದ ಪಡೀಲು ಬಳಿ ರೈಲು ಹಳಿಗೆ ಗುಡ್ಡ ಕುಸಿತಗೊಂಡಿದೆ.
ಈ ಹಿನ್ನೆಲೆಯಲ್ಲಿ ಎರಡು ರೈಲುಗಳ ಸಂಚಾರವನ್ನು ರೈಲ್ವೇ ಇಲಾಖೆ ಸ್ಥಗಿತಗೊಳಿಸಿದೆ. ಮಂಗಳೂರು-ಸುಬ್ರಹ್ಮಣ್ಯ ಮಾರ್ಗದ ಎರಡು ವಿಶೇಷ ರೈಲುಗಳ(06488 ಮತ್ತು 06489) ಸಂಚಾರ ಸ್ಥಗಿತಗೊಂಡಿದೆ.
ಹಿಟಾಚಿ ಮೂಲಕ ರೈಲು ಹಳಿಯ ಮೇಲೆ ಕುಸಿದಿರುವ ಮಣ್ಣು ತೆರವು ಕಾರ್ಯ ನಡೆಸಲಾಗಿದೆ.
- Advertisement -