- Advertisement -
- Advertisement -
ಚಾರ್ಮಾಡಿ ಘಾಟ್ ನ 10ನೇ ತಿರುವಿನಲ್ಲಿ ಮತ್ತೆ ನಿನ್ನೆ ರಾತ್ರಿ ಗುಡ್ಡ ಕುಸಿತವಾಗಿದೆ. ಪರಿಣಾಮ ಮರ ಹಾಗೂ ಗುಡ್ಡದ ಮಣ್ಣು ರಸ್ತೆಗೆ ಬಿದ್ದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತವಾಗಿತ್ತು.
ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಬಿರುಗಾಳಿ ಸಹಿತ ಮಳೆಯಾಗಿದೆ. ಪರಿಣಾಮ ಅಲ್ಲಲ್ಲಿ ಅನೇಕ ಅನಾಹುತಗಳು ನಡೆಯುತ್ತಲೇ ಇವೆ. ಇನ್ನು ಗುಡ್ಡ ಕುಸಿತ ಹಿನ್ನೆಲೆ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ವಾಹನಗಳನ್ನು ಪೊಲೀಸರು ತಡೆದಿದ್ದಾರೆ.ಘಾಟ್ ಪ್ರವೇಶ ಮಾಡದಂತೆ ವಾಹನಗಳನ್ನು ಪೊಲೀಸರು ತಡೆದಿದ್ದಾರೆ.
- Advertisement -