- Advertisement -
![]()
- Advertisement -
ಬಂಟ್ವಾಳ: ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಮಂಗಳೂರು – ಬೆಂಗಳೂರು ರಸ್ತೆಯ ಪೆರ್ನೆಯಲ್ಲಿ ಗುಡ್ಡ ಕುಸಿತವಾಗಿದೆ.
ಚತುಷ್ಪತ ರಸ್ತೆ ಮೇಲೆ ಮಣ್ಣು ಕುಸಿದು ಬೀಳುತ್ತಿದ್ದು, ಒಂದು ಬದಿಯ ರಸ್ತೆ ಸಂಪೂರ್ಣ ಬಂದ್ ಆಗಿದೆ. ಇನ್ನೊಂದು ಬದಿಯ ರಸ್ತೆಯ ಮೂಲಕ ವಾಹನಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.ರಾಷ್ಟ್ರೀಯ ಹೆದ್ದಾರಿಯವರ ಅವೈಜ್ಞಾನಿಕ ರೀತಿಯಲ್ಲಿ ಗುಡ್ಡಗಳನ್ನು ಜರಿದ ಪರಿಣಾಮವಾಗಿ ಇದೀಗ ರಸ್ತೆಯ ಭೂಕುಸಿತ ಗಳು ಶುರುವಾಗಿದೆ ಎಂದು ಜನ ಆಕ್ರೋಶ ಹೊರ ಹಾಕುತ್ತಿದ್ದಾರೆ.
ಇದೇ ರೀತಿ ಬೆಳಿಗ್ಗೆ ವರೆಗೆ ಮಳೆ ಮುಂದುವರಿದರೆ ರಸ್ತೆಗೆ ಇನ್ನಷ್ಟು ಗುಡ್ಡ ಜರಿತವುಂಟಾಗಿ ಸಂಪರ್ಕಕ್ಕೆ ಅಡಚಣೆಗಳು ಉಂಟಾಗಬಹುದು ಎನ್ನಲಾಗುತ್ತಿದ್ದೆ. ಸ್ಥಳದಲ್ಲಿ ಉಪ್ಪಿನಂಗಡಿ ಪೋಲೀಸರು ಕಾವಲಿದ್ದು, ವಾಹನಸಂಚಾರಕ್ಕೆ ಯಾವುದೇ ಅಡಚಣೆಯಾಗದಂತೆ ವ್ಯವಸ್ಥೆ ಮಾಡಿಕೊಂಡಿದ್ದಾರೆ.
- Advertisement -


