- Advertisement -
- Advertisement -
ಮಂಗಳೂರು ನಿನ್ನೆಯಷ್ಟೇ ಸಂಸದ ಪ್ರತಾಪ್ ಸಿಂಹ ಲವ್ ಜಿಹಾದ್ ಬಗ್ಗೆ ಕಾನೂನು ಜಾರಿಗೆ ತರಲಾಗುತ್ತದೆ ಅಂತಾ ಹೇಳಿಕೆಯನ್ನು ನೀಡಿದ್ದರು. ಇಂದು ಸಿಎಂ ಬಿಎಸ್ವೈ ಅವರು ಕೂಡ ಈ ಬಗ್ಗೆ ಮಾತನಾಡಿದ್ದಾರೆ.
ಮಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಸಿಎಂ ಲವ್ ಜಿಹಾದ್ ವಿರುದ್ಧ ಕಠಿಣ ಕ್ರಮಕ್ಕೆ ಕಾನೂನು ತರಲಿದ್ದೇವೆ ಎಂದು ಹೇಳಿದ್ದಾರೆ. ಇಂದು ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಸಿಎಂ ಬಿಎಸ್ವೈ.. ಇತ್ತೀಚೆಗೆ ಮತಾಂತರಗೊಳಿಸುತ್ತಿರುವ ಪ್ರಕರಣದ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತ್ತಿವೆ. ಈ ಸಂಬಂಧ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇನೆ. ಬೇರೆ ರಾಜ್ಯದಲ್ಲಿ ಯಾರು ಮಾಡಿದ್ದಾರೋ? ಬಿಟ್ಟಿದ್ದಾರೋ ಗೊತ್ತಿಲ್ಲ. ಕರ್ನಾಕಟದಲ್ಲಿ ಇದಕ್ಕೆ ಅಂತ್ಯ ಹಾಡಬೇಕಾಗಿದೆ ಎಂದರು.
ರಾಜ್ಯದ ಹೆಣ್ಣು ಮಕ್ಕಳಿಗೆ ಪ್ರೀತಿ, ಪ್ರೇಮ, ಹಣದ ಆಮಿಷವೊಡ್ಡಿ ಮತಾಂತರಗೊಳಿಸುತ್ತಿರೋದನ್ನ ತಡೆಯಬೇಕಾಗಿದೆ. ಈ ಬಗ್ಗೆ ಸಮಗ್ರವಾದ ಪರಿಶೀಲನೆ ಮಾಡಿ, ಒಂದು ಬಿಗಿಯಾದ ಕ್ರಮವನ್ನ ಕೈಗೊಳ್ಳುವುದಾಗಿ ಹೇಳಿದ್ದಾರೆ.
- Advertisement -