Friday, June 27, 2025
HomeUncategorizedಶ್ರೀರಾಮ ಮಂದಿರದಲ್ಲಿ ಅಪೂರ್ಣ ಕಾಮಗಾರಿಯಿಂದ ಸೋರಿಕೆ; ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಶ್ರೀರಾಮ ಮಂದಿರದಲ್ಲಿ ಅಪೂರ್ಣ ಕಾಮಗಾರಿಯಿಂದ ಸೋರಿಕೆ; ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

spot_img
- Advertisement -
- Advertisement -

ವಿಜಯಪುರ: ‘ರಾಮಮಂದಿರ ಕಾಮಗಾರಿಯಲ್ಲಿ ಯಾವುದೇ ಕುಂದುಕೊರತೆಯಾಗಿಲ್ಲ. ಅಯೋಧ್ಯೆ ಶ್ರೀರಾಮ ಮಂದಿರದ ಚಾವಣಿ ನಿರ್ಮಾಣ ಇನ್ನೂ ಪೂರ್ಣವಾಗಿರದ ಕಾರಣಕ್ಕೆ ಮಳೆ ಬಂದಾಗ ಸೋರಿಕೆಯಾಗಿದೆ. ಇನ್ನೊಂದು ವರ್ಷದೊಳಗೆ ಮಂದಿರ ನಿರ್ಮಾಣ ಕಾರ್ಯ ಸಂಪೂರ್ಣಗೊಳ್ಳಲಿದೆ’ ಎಂದು ಉಡುಪಿ ಪೇಜಾವರ ಮಠದ ಪೀಠಾಧಿಪತಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.

ಗುರುವಾರದಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,”ಬಿಜೆಪಿ ಪಕ್ಷಕ್ಕೆ ಪ್ರತಿ ಪಕ್ಷಗಳ ಮೋಸ, ಆಸೆ, ಆಮಿಷದಿಂದಾಗಿ ಅಯೋಧ್ಯೆಯಲ್ಲಿ ಸೋಲಾಗಿದೆಯೇ ಹೊರತು, ಇದನ್ನು ಹಿಂದುಗಳಿಗೆ ಹಿನ್ನೆಡೆ ಎಂದು ವಿಶ್ಲೇಷಿಸುವುದು ಸರಿಯಲ್ಲ. ಅಯೋಧ್ಯೆಯಲ್ಲಿ ಬಡತನ ಹೆಚ್ಚಿರುವುದರಿಂದ ಮತದಾರರು ಆಸೆ, ಆಮಿಷಕ್ಕೆ ಒಳಗಾಗಿ ಮತ ಚಲಾಯಿಸಿದ್ದಾರೆ. ಇದು ಹಿಂದುಗಳ ಧಾರ್ಮಿಕ ನಂಬಿಕೆಗೆ ಹೊಡೆತ ಎಂದು ಭಾವಿಸಬಾರದು” ಎಂದು ಸ್ಪಷ್ಟಪಡಿಸಿದರು.

ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ನೀಡಿದ‘ತಮ್ಮನ್ನು ತಾವು ಹಿಂದುಗಳೆಂದು ಕರೆದುಕೊಳ್ಳುವವರು ಹಿಂಸಾಚಾರ, ದ್ವೇಷದಲ್ಲಿ ಹಗಲಿರುಳು ನಿರತವಾಗಿದ್ದಾರೆ’ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ,‘ಸಹಿಷ್ಣುಗಳಾದ ಹಿಂದುಗಳನ್ನು ಕೆಣಕಬೇಕು, ಒಂದಷ್ಟು ಗೊಂದಲ ಸೃಷ್ಟಿಸಬೇಕು, ತಮ್ಮ ಬೇಳೆ ಬೇಯಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಇಂತಹ ಹೇಳಿಕೆ ನೀಡಿದ್ದಾರೆ. ರಾಜಕೀಯ ನಾಯಕರು ಇಂತಹ ಬೇಜವಾಬ್ದಾರಿ ಹೇಳಿಕೆ ನೀಡಬಾರದು’ ಎಂದರು.

- Advertisement -
spot_img

Latest News

error: Content is protected !!