- Advertisement -
- Advertisement -
ಸುಬ್ರಹ್ಮಣ್ಯ: ತಡರಾತ್ರಿ ಚಿರತೆ ದಾಳಿ ನಡೆಸಿ ಸಾಕು ನಾಯಿಯನ್ನು ಹೊತ್ತೊಯ್ದ ಘಟನೆ ಸುಬ್ರಹ್ಮಣ್ಯ ಸಮೀಪದ ಕೈಕಂಬದಲ್ಲಿ ನಡೆದಿದೆ .
ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಕೈಕಂಬ ಬಳಿಯ ವೆಂಕಟಪುರ ಲೀಲಾವತಿ ದೇವರಾಜ್ ಅವರ ಎರಡು ಸಾಕು ನಾಯಿಗಳು ಮನೆಯ ಗೇಟ್ ಬಳಿ ಓಡಾಟ ನಡೆಸುತ್ತಿತ್ತು. ಈ ವೇಳೆ ದಿಢೀರ್ ಚಿರತೆ ದಾಳಿ ನಡೆಸಿ ಒಂದು ನಾಯಿಯನ್ನು ಹೊತ್ತೊಯ್ದಿದೆ.
ನಾಯಿಯ ಕೂಗಾಟ ಕೇಳಿ ಕೆಲಸದಾಳು ಎಚ್ಚರಗೊಂಡಿದ್ದಾರೆ. ಕೆಲಸದಾಳುವಿನ ಎದುರಲ್ಲೇ ಚಿರತೆ ನಾಯಿ ಮೇಲೆ ದಾಳಿ ನಡೆಸಿರುವುದು ಮನೆಯಲ್ಲಿ ಅಳವಡಿಸಲಾದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
- Advertisement -