Sunday, May 12, 2024
Homeಕರಾವಳಿಸುಬ್ರಹ್ಮಣ್ಯ: ತಡರಾತ್ರಿ ದಾಳಿ ನಡೆಸಿ ಸಾಕು ನಾಯಿಯನ್ನು ಹೊತ್ತೊಯ್ದ ಚಿರತೆ

ಸುಬ್ರಹ್ಮಣ್ಯ: ತಡರಾತ್ರಿ ದಾಳಿ ನಡೆಸಿ ಸಾಕು ನಾಯಿಯನ್ನು ಹೊತ್ತೊಯ್ದ ಚಿರತೆ

spot_img
- Advertisement -
- Advertisement -

ಸುಬ್ರಹ್ಮಣ್ಯ: ತಡರಾತ್ರಿ ಚಿರತೆ ದಾಳಿ ನಡೆಸಿ ಸಾಕು ನಾಯಿಯನ್ನು ಹೊತ್ತೊಯ್ದ ಘಟನೆ ಸುಬ್ರಹ್ಮಣ್ಯ ಸಮೀಪದ ಕೈಕಂಬದಲ್ಲಿ ನಡೆದಿದೆ .

ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಕೈಕಂಬ ಬಳಿಯ ವೆಂಕಟಪುರ ಲೀಲಾವತಿ ದೇವರಾಜ್ ಅವರ ಎರಡು ಸಾಕು ನಾಯಿಗಳು ಮನೆಯ ಗೇಟ್ ಬಳಿ ಓಡಾಟ ನಡೆಸುತ್ತಿತ್ತು. ಈ ವೇಳೆ ದಿಢೀರ್ ಚಿರತೆ ದಾಳಿ ನಡೆಸಿ ಒಂದು ನಾಯಿಯನ್ನು ಹೊತ್ತೊಯ್ದಿದೆ.

ನಾಯಿಯ ಕೂಗಾಟ ಕೇಳಿ ಕೆಲಸದಾಳು ಎಚ್ಚರಗೊಂಡಿದ್ದಾರೆ. ಕೆಲಸದಾಳುವಿನ ಎದುರಲ್ಲೇ ಚಿರತೆ ನಾಯಿ ಮೇಲೆ ದಾಳಿ ನಡೆಸಿರುವುದು ಮನೆಯಲ್ಲಿ ಅಳವಡಿಸಲಾದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

- Advertisement -
spot_img

Latest News

error: Content is protected !!