- Advertisement -
- Advertisement -
ಬೆಳ್ತಂಗಡಿ:ಚಿರತೆ ದಾಳಿಗೆ ಹಸುವೊಂದು ಬಲಿಯಾದ ಘಟನೆ ಬೆಳ್ತಂಗಡಿ ತಾಲೂಕಿನ ಕುದ್ಯಾಡಿ ಗ್ರಾಮದಲ್ಲಿ ನಡೆದಿದೆ.
ಕುದ್ಯಾಡಿ ಗ್ರಾಮದ ಕೆಳಗಿನಬೆಟ್ಟು ಮನೆಯ ಶೀನ ಪೂಜಾರಿ ಅವರು ದನವನ್ನು ತೋಟದಲ್ಲಿ ಮೇಯಲು ಬಿಟ್ಟಿದ್ದರು. ಸುಮಾರು 11 ಗಂಟೆ ಸಮಯಕ್ಕೆ ಚಿರತೆ ದನದ ಮೇಲೆ ದಾಳಿ ಮಾಡಿದೆ.ಮನೆಯವರು ತೋಟಕ್ಕೆ ಬಂದಾಗ ಚಿರತೆ ಮನೆಯವರನ್ನು ಅಟ್ಟಾಡಿಸಿದೆ. ಚಿರತೆಯ ದಾಳಿಗೆ ದನ ಬಲಿಯಾಗಿದೆ. ಕೂಡಲೇ ಸ್ಥಳೀಯ ಪಂಚಾಯತ್ ಸದಸ್ಯರೊಬ್ಬರಿಗೆ ಕರೆ ಮಾಡಿ ವಿಷಯ ತಿಳಿಸಿದ್ದು ಅವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಸುಲ್ಕೇರಿ ಪಂಚಾಯತ್ ಅಧ್ಯಕ್ಷ ನಾರಾಯಾಣ ಪೂಜಾರಿ, ಅಳದಂಗಡಿ ಉಪ ಅರಣ್ಯಧಿಕಾರಿ ಸುರೇಶ್ ಗೌಡ ಹಾಗೂ ಸ್ಥಳೀಯರು ಭೇಟಿ ನೀಡಿದ್ದಾರೆ. ಚಿರತೆ ಹಾವಳಿಯಿಂದ ಈ ಭಾಗದ ಜನ ಭಯಬೀತರಾಗಿದ್ದಾರೆ. ಈಗಾಗಲೇ ಬೋನ್ ಅಳವಡಿಸಲಾಗಿದೆ.
- Advertisement -