Friday, June 27, 2025
Homeಕರಾವಳಿಮಂಗಳೂರು: ಸ್ವತಃ ಬಾವಿಗೆ ಇಳಿದು ಚಿರತೆ ಸೆರೆ ಹಿಡಿದ ಮಹಿಳಾ ಪಶು ವೈದ್ಯೆ; ವೈದ್ಯೆಯ ಧೈರ್ಯಕ್ಕೆ...

ಮಂಗಳೂರು: ಸ್ವತಃ ಬಾವಿಗೆ ಇಳಿದು ಚಿರತೆ ಸೆರೆ ಹಿಡಿದ ಮಹಿಳಾ ಪಶು ವೈದ್ಯೆ; ವೈದ್ಯೆಯ ಧೈರ್ಯಕ್ಕೆ ಸಲಾಂ ಎಂದ ಜನ

spot_img
- Advertisement -
- Advertisement -

ಮಂಗಳೂರು: ಕಟೀಲು ಸಮೀಪದ ನಿಡ್ಡೋಡಿಯಲ್ಲಿ ಬಾವಿಗೆ ಬಿದ್ದಿದ್ದ ಸುಮಾರು ಒಂದು ವರ್ಷ ಪ್ರಾಯದ ಹೆಣ್ಣು ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ತಜ್ಞ ವೈದ್ಯರು ಮತ್ತು ಸ್ಥಳೀಯರ ನೆರವಿನಲ್ಲಿ ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿ ಮೇಲೆತ್ತಿದ್ದಾರೆ.

ಡಾ ಮೇಘನಾ ಪೆಮ್ಯಯ್ಯ, ಡಾ.ಯಶಸ್ವಿ ನಾರಾವಿ, ಡಾ ಪೃಥ್ವಿ ಮತ್ತು ಡಾ. ನಫೀಸಾ ನೇತೃತ್ವದ ಮಂಗಳೂರಿನ ಚಿಟ್ಟೆಪಿಲಿ ರಕ್ಷಣಾ ತಂಡವು ಅರಣ್ಯ ಅಧಿಕಾರಿಗಳು ಮತ್ತು ಸ್ಥಳೀಯರ ಸಹಾಯದಿಂದ ಚಿರತೆಯನ್ನು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ.

ಅದರಲ್ಲೂ ಪಶುವೈದ್ಯೆ ಡಾ.ಮೇಘನಾ ಅವರ ಧೈರ್ಯ ನೋಡಿದ್ರೆ ಎಂತಹವರು ಭೇಷ್ ಅನ್ನುತ್ತಾರೆ. ಅಂದ್ಹಾಗೆ ತುಂಬಾ ಆಳವಾಗಿದ್ದ ಬಾವಿಯ ತಳಭಾಗದಲ್ಲಿ ಮಣ್ಣು ಜರಿದು ಬಿದ್ದು ಗುಹೆ ನಿರ್ಮಾಣವಾಗಿತ್ತು. ಅದೇ ಗುಹೆಯಲ್ಲಿ ಅಡಗಿದ್ದ ಚಿರತೆಯನ್ನು ತಜ್ಞ ವೈದ್ಯರಾದ ಡಾ. ಮೇಘನಾ ಬೋನಿನಲ್ಲಿ ಬಾವಿಗೆ ಇಳಿದು ಬಂದೂಕಿನ ಮೂಲಕ ಅರಿವಳಿಕೆ ಔಷಧಿಯನ್ನು ಪ್ರಯೋಗಿಸಿದ್ದಾರೆ. ಬಳಿಕ ಬೋನಿನ ಮೂಲಕ ಬಾವಿಯಿಂದ ಚಿರತೆಯನ್ನು ಮೇಲಕ್ಕೆ ತರಲಾಗಿದೆ.

ಎರಡು ದಿನಗಳ ಹಿಂದೆ ಮನೆಯ ಬಾವಿಗೆ ಬಿದ್ದಿದ್ದ ಚಿರತೆಯನ್ನು ಮೇಲೆಕ್ಕೆ ಎತ್ತಲು ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳೀಯರ ಸಹಾಯದಿಂದ ದಿನವಿಡೀ ಶ್ರಮಿಸಿದ್ದರು. ಆದರೆ ಫಲಕಾರಿಯಾಗಿರಲಿಲ್ಲ. ಮೂಡಬಿದ್ರೆಯ ಅರಣ್ಯ ಇಲಾಖೆಯ ಎಸಿಎಫ್ ಸತೀಶ್ ಎನ್, ಆರ್‌ಎಫ್‌ಒ ಹೇಮಗಿರಿ ಅಂಗಡಿ, ಡಿಆರ್‌ಎಫ್‌ಒ ಮಂಜುನಾಥ್ ಗಾಣಿಗ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

- Advertisement -
spot_img

Latest News

error: Content is protected !!