- Advertisement -
- Advertisement -
ಹುಬ್ಬಳ್ಳಿ: ಮಂದಿರ ಕಟ್ಟುವ ಜೊತೆಗೆ ಬಡವರಿಗೆ ಮನೆ ಕಟ್ಟಿಸಿಕೊಡುವ ಸಂಕಲ್ಪ ಮಾಡೋಣ ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥರು ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಮರಾಜ್ಯ ನಿರ್ಮಾಣಕ್ಕೆ ಪೇಜಾವರ ಶ್ರೀಗಳಿಂದ ಹೊಸ ಸಂಕಲ್ಪ ಕೈಗೊಂಡಿದ್ದು, ರಾಷ್ಟ್ರಾದ್ಯಂತ ರಾಮಸೇವಾ ಸಂಕಲ್ಪ ಕೈಗೊಳ್ಳಲು ಪ್ರಧಾನಿ ನರೇಂದ್ರ ಮೋದಿಗೂ ಸಹ ಸೂಚನೆ ನೀಡಲಾಗಿದೆ. ನಮ್ಮಲ್ಲಿ 1 ವರ್ಷಕ್ಕೆ ಸುಮಾರು 5 ಲಕ್ಷ ರೂಪಾಯಿ ಖರ್ಚು ಮಾಡುವವರು ಇದ್ದಾರೆ. ಅದೇ 5 ಲಕ್ಷ ರೂ. ಖರ್ಚು ಮಾಡಿದ್ರೆ ಸುಂದರವಾದ ಸಣ್ಣ ಮನೆ ನಿರ್ಮಾಣವಾಗುತ್ತದೆ. ಹೀಗಾಗಿ ದೀನ ದಲಿತರಿಗೆ ಮನೆ ಕಟ್ಟಿಸಿ ಕೊಡೋಣ ಎಂದು ಕರೆ ನೀಡಿದರು.
- Advertisement -