Saturday, June 28, 2025
Homeಕರಾವಳಿಮೂಡುಶೆಡ್ಡೆ: ಯುವಕನನ್ನು ಅಟ್ಟಾಡಿಸಿ ತಲವಾರು ತೋರಿಸಿ ದಾಂಧಲೆ ; ಏಳು ಮಂದಿ ಬಂಧನ!

ಮೂಡುಶೆಡ್ಡೆ: ಯುವಕನನ್ನು ಅಟ್ಟಾಡಿಸಿ ತಲವಾರು ತೋರಿಸಿ ದಾಂಧಲೆ ; ಏಳು ಮಂದಿ ಬಂಧನ!

spot_img
- Advertisement -
- Advertisement -

ಮಂಗಳೂರು :ಬಹಿರಂಗವಾಗಿ ಕೊಲೆ ನಡೆಸುವ ಬೆದರಿಕೆ ಹಾಕಿ ನಡುರಸ್ತೆಯಲ್ಲಿ ದಾಂಧಲೆ ನಡೆಸಿದ ರೌಡಿಗಳ ತಂಡವನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.

ಇಮ್ರಾನ್, ರಿಜ್ವಾನ್, ರಮೀಜ್, ಮುಸ್ತಾಫ್, ಶಾರುಖ್ ಮತ್ತು ಅಶ್ಪಾಕ್ ಎಂಬವರು ಅಟ್ಟಿಸಿಕೊಂಡು ಬಂದಿದ್ದು, ಅವರ ವಿರುದ್ಧ ಕೇಸು ದಾಖಲಾಗಿದೆ. ಈ ಪೈಕಿ ರಿಜ್ವಿನ್ ರೌಡಿ ಶೀಟರ್ ಆಗಿದ್ದು ಬಹಿರಂಗ ಬೆದರಿಕೆ ಹಾಕಿದ್ದು ವಿಡಿಯೋದಲ್ಲಿ ದಾಖಲಾಗಿತ್ತು.

ತಲವಾರು ತೋರಿಸಿ ಬಹಿರಂಗವಾಗಿ ಕೊಲೆ ನಡೆಸುವ ಬೆದರಿಕೆ ಹಾಕಿದ್ದಲ್ಲದೆ, ನಡುರಸ್ತೆಯಲ್ಲಿ ದಾಂಧಲೆ ನಡೆಸಿದ ರೌಡಿಗಳ ತಂಡವನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಕೊಲೆಯತ್ನ, ಬೆದರಿಕೆ, ಹಲ್ಲೆ ನಡೆಸಿದ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ.

ಮೂಡುಶೆಡ್ಡೆಯಲ್ಲಿ ವಿವೇಕಾನಂದ ಎನ್ನುವ ಬಜರಂಗದಳದ ಕಾರ್ಯಕರ್ತನನ್ನು ಅ.7ರಂದು ಸಂಜೆ ಅಟ್ಟಿಸಿಕೊಂಡು ಬಂದಿದ್ದ ಏಳು ಮಂದಿಯ ತಂಡ ನಡುರಸ್ತೆಯಲ್ಲಿ ದಾಂಧಲೆಗೆ ಮುಂದಾಗಿದ್ದು,ತಕ್ಷಣ ವಿವೇಕಾನಂದ ಅಲ್ಲಿನ ಅಂಗಡಿಯೊಂದಕ್ಕೆ ನುಗ್ಗಿ ಅಪಾಯದಿಂದ ಪಾರಾಗಿದ್ದ. ತಂಡದಲ್ಲಿ ರೌಡಿ ಶೀಟರ್ ಗಳಿದ್ದರು ಎಂದು ಹೇಳಲಾಗಿದ್ದು, ಬಹಿರಂಗವಾಗಿ ತಲವಾರು ತೋರಿಸಿ ಬೆದರಿಸಿದ್ದಲ್ಲದೆ, ಮಹಿಳೆಯರು, ಮಕ್ಕಳನ್ನು ಬೆದರಿಸಿ ತೆರಳಿದ್ದರು. ಈ ಘಟನೆಯ ವೇಳೆ ಸ್ಥಳೀಯರು ವಿಡಿಯೋ ಮಾಡಿದ್ದು ವೈರಲ್ ಆಗಿತ್ತು. ವಿಡಿಯೋ ಆಧರಿಸಿ, ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ.

ಕಾಂಗ್ರೆಸ್ ಮುಖಂಡ ಮಿಥುನ್ ರೈ ಪರವಾಗಿ ಪೋಸ್ಟರ್ ಹಾಕುತ್ತಿದ್ದ ವೇಳೆ ಎರಡು ತಂಡಗಳ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಹಿಂದು ಯುವಕರು ಪೋಸ್ಟರ್ ಹಾಕಿದ್ದನ್ನು ಮುಸ್ಲಿಮ್ ಯುವಕರು ಪ್ರಶ್ನೆ ಮಾಡಿದ್ದರು. ನೀವು ಬಿಜೆಪಿ ಅಲ್ವಾ ಎಂದು ಪ್ರಶ್ನೆ ಮಾಡಿದ್ದು ಆನಂತರ ವಾಗ್ಯುದ್ಧಕ್ಕೆ ಕಾರಣವಾಗಿತ್ತು. ಆನಂತರ, ಅಲ್ಲಿದ್ದ ಬಜರಂಗದಳದ ಯುವಕ ವಿವೇಕಾನಂದ ಎಂಬಾತನನ್ನು ಮುಸ್ಲಿಂ ಯುವಕರು ಅಟ್ಟಿಸಿಕೊಂಡು ಬಂದಿದ್ದರು ಎನ್ನಲಾಗಿದೆ.

ಮೂಡುಶೆಡ್ಡೆಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿ ಹಿಂದು ಸಂಘಟನೆಗೆ ಸೇರಿದ ಮನೋಜ್ ಮತ್ತು ವೀರೇಶ್ ಎಂಬವರನ್ನೂ ಪೊಲೀಸರು ಬಂಧಿಸಿದ್ದಾರೆ. ಇದಕ್ಕೂ ಮುನ್ನ ಅ.6ರಂದು ರಾತ್ರಿ ಅಶ್ಫಾಕ್ ಎಂಬ ಯುವಕನಿಗೆ ನಾಲ್ವರ ತಂಡವೊಂದು ಹಲ್ಲೆ ನಡೆಸಿತ್ತು. ಆಟೋ ರಿಕ್ಷಾದಲ್ಲಿ ಬಂದಿದ್ದ ತಂಡ ಹಲ್ಲೆ ನಡೆಸಿದ್ದು ಅಲ್ಲಿನ ಸಿಸಿಟಿವಿಯಲ್ಲಿ ದಾಖಲಾಗಿತ್ತು. ಈ ಘಟನೆಗೆ ಪ್ರತೀಕಾರ ರೂಪದಲ್ಲಿ ಮರುದಿನ ಗುರುವಾರ ಸಂಜೆ ರಿಜ್ವಾನ್ ಮತ್ತು ತಂಡ ತಲವಾರು ತೋರಿಸಿ ಬೆದರಿಕೆ ಹಾಕಿದೆ ಎನ್ನಲಾಗುತ್ತಿದೆ. ಇವೆರಡೂ ಘಟನೆಗೆ ಸಂಬಂಧಿಸಿ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ.

- Advertisement -
spot_img

Latest News

error: Content is protected !!