- Advertisement -
- Advertisement -
ಮಂಗಳೂರು: ಬಾರ್ ಆಂಡ್ ರೆಸ್ಟೋರೆಂಟ್ಗೆ ನುಗ್ಗಿ ಬಾರ್ ಮ್ಯಾನೇಜರ್ ಗೆ ಜೀವ ಬೆದರಿಕೆ ಹಾಕಿದ ಘಟನೆ ಮಂಗಳೂರಿನ ವಾಮಂಜೂರಿನಲ್ಲಿ ನಡೆದಿದೆ.
ಬಾರ್ ಆಂಡ್ ರೆಸ್ಟೋರೆಂಟ್ಗೆ ನುಗ್ಗಿದ ವ್ಯಕ್ತಿಯೊಬ್ಬ ಮದ್ಯ ನೀಡಲಿಲ್ಲ ಎಂಬ ಕಾರಣಕ್ಕೆ ಬಾರ್ ಮ್ಯಾನೇಜರ್ಗೆ ಜೀವ ಬೆದರಿಕೆ ಹಾಕಿದ್ದಾನೆ.ವಾಮಂಜೂರು ನಿವಾಸಿ ಲಾಯ್ಡ್ ಜೀವ ಬೆದರಿಕೆ ಹಾಕಿದ ಆರೋಪಿ.
ಬಾರ್ ಮ್ಯಾನೇಜರ್ ಬಾರ್ ಆಂಡ್ ರೆಸ್ಟೋರೆಂಟ್ಗೆ ಶಟರನ್ನು ಎಳೆದು ಲೆಕ್ಕಾಚಾರ ನೋಡುತ್ತಿರುವಾಗ ಗಿರಾಕಿ ಲಾಯ್ಡ್ ಎಂಬಾತ ಸ್ಕೂಟರ್ನಲ್ಲಿ ಆಗಮಿಸಿ ಬಾರ್ನ ಒಳಗೆ ಅಕ್ರಮವಾಗಿ ಪ್ರವೇಶ ಮಾಡಿ, ಮದ್ಯ ಕೊಡಬೇಕು ಎಂದು ಒತ್ತಾಯಿಸಿದ್ದಾನೆ. ಈ ವೇಳೆ ಬಾರ್ ಕೌಂಟರ್ ಈಗಾಗಲೇ ಬಂದ್ ಆಗಿದೆ. ಮದ್ಯ ಕೊಡಲಾಗುವುದಿಲ್ಲ ಎಂದು ಮ್ಯಾನೇಜರ್ ಹೇಳಿದಾಗ ಕೋಪಗೊಂಡ ಆರೋಪಿ ಲಾಯ್ಡ್ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -