- Advertisement -
- Advertisement -
ಉಡುಪಿ: ಕೆಎಸ್ ಆರ್ ಟಿಸಿ ಮಂಗಳೂರು ವಿಭಾಗದ ಬಸ್ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಮೇ 3ರಂದು ಅಂಕೋಲದ ಹಟ್ಟಿಕೇರಿಯಲ್ಲಿ ನಡೆಯುವ ಪ್ರಧಾನಮಂತ್ರಿಗಳ ಕಾರ್ಯಕ್ರಮಕ್ಕೆ ನಿಯೋಜಿ ಸಲಾಗಿರುವುದರಿಂದ, ಇಂದು ಮಂಗಳೂರು ವಿಭಾಗ ವ್ಯಾಪ್ತಿಯ ಉಡುಪಿ, ಕಾರ್ಕಳ, ಕುಂದಾಪುರ, ಸಿದ್ಧಾಪುರ, ಬೈಂದೂರು ಹಾಗೂ ಭಟ್ಕಳ ವಲಯ ಸಾರಿಗೆ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಪ್ರಯಾಣಿಕರು ಕ.ರಾ.ರ.ಸಾ. ನಿಗಮದೊಂದಿಗೆ ಸಹಕರಿ ಸುವಂತೆ ನಿಗಮದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -