- Advertisement -
- Advertisement -
ಮಂಗಳೂರು: ದಿನದಿಂದ ದಿನಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಸಂಪೂರ್ಣವಾಗಿ ಲಾಕ್ ಡೌನ್ ಮಾಡುವ ಕುರಿತು ಸುಳಿವನ್ನು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಜಿಲ್ಲೆಯಲ್ಲಿ ಸಂಪೂರ್ಣವಾಗಿ ಲಾಕ್ ಡೌನ್ ಮಾಡುವ ಕುರಿತಂತೆ ಜಿಲ್ಲೆಯ ಸಂಸದರು, ಶಾಸಕರು, ಜಿಲ್ಲಾಧಿಕಾರಿಗಳ ಜೊತೆಗೆ ಸಭೆ ನಡೆಸಿ ಮಾತುಕತೆ ನಡೆಸಲಿದ್ದೇನೆ. ಈ ಬಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪರ ಜೊತೆ ಸೋಮವಾರ ಬೆಳಗ್ಗೆ 11 ಗಂಟೆಗೆ ಸಭೆ ಇದ್ದು, ಬಳಿಕ ಈ ಬಗ್ಗೆ ತೀರ್ಮಾನಿಸಲಾಗುವುದು. ಹಾಗೆಯೆ ಸಾರ್ವಜನಿಕರು ಗಾಬರಿಯಾಗುವುದು ಬೇಡ. ಯಾವುದೇ ಕಾರಣಕ್ಕೂ ಧಿಡೀರ್ ಲಾಕ್ಡೌನ್ ಮಾಡುವುದಿಲ್ಲ ಎಂದು ಹೇಳಿದ್ದಾರೆ.
- Advertisement -