- Advertisement -
- Advertisement -
ಬೆಂಗಳೂರು: ರಾಜ್ಯದಲ್ಲಿ ಇನ್ನೆರಡು ದಿನಗಳ ಕಾಲ ಲಾಕ್ ಡೌನ್ ಮುಂದುವರಿಯಲಿದೆ. ಮೇ 19 ರವರೆಗೆ ಈ ಹಿಂದಿನ ಲಾಕ್ಡೌನ್ ಮಾರ್ಗಸೂಚಿಗಳನ್ನು ಪಾಲಿಸುವಂತೆ ಕರ್ನಾಟಕ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಹೊಸ ಮಾರ್ಗಸೂಚಿ ಬರುವವರೆಗೂ ರಾಜ್ಯದಲ್ಲಿ ಯಥಾಸ್ಥಿತಿ ಮುಂದುವರಿಸಲಾಗುವುದು. ರಾಜ್ಯ ಸರ್ಕಾರದಿಂದ ಹಿರಿಯ ಅಧಿಕಾರಿಗಳಿಗೆ ಈ ಕುರಿತಾಗಿ ಆದೇಶ ನೀಡಲಾಗಿದೆ.
ಲಾಕ್ ಡೌನ್ ಮುಂದುವರಿಕೆ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದು, ಕಡ್ಡಾಯವಾಗಿ ಈಗಿರುವ ಲಾಕ್ ಡೌನ್ ನಿಯಮ ಪಾಲಿಸುವಂತೆ ಸೂಚಿಸಲಾಗಿದೆ.
ಮುಂದಿನ ಆದೇಶದವರೆಗೆ ಇಲ್ಲವೇ ಮೇ 19 ರ ಮಧ್ಯರಾತ್ರಿಯವರೆಗೆ ಈಗಿರುವ ಲಾಕ್ ಡೌನ್ ಮುಂದುವರೆಸಬೇಕೆಂದು ತಿಳಿಸಲಾಗಿದ್ದು, ಅಲ್ಲಿವರೆಗೂ ಎಲ್ಲಾ ಲಾಕ್ ಡೌನ್ ನಿರ್ಬಂಧಗಳು ಮುಂದುವರೆಯಲಿವೆ ಎಂದು ಹೇಳಲಾಗಿದೆ.
- Advertisement -