Friday, April 26, 2024
Homeತಾಜಾ ಸುದ್ದಿಷರತ್ತಿನೊಂದಿಗೆ ಕೆಲವು ಜಿಲ್ಲೆಗಳಲ್ಲಿ ಲಾಕ್​ಡೌನ್ ಸಡಿಲಿಕೆ : ​ ಕರ್ನಾಟಕ ಸರಕಾರದಿಂದ ಹೊಸ ಮಾರ್ಗಸೂಚಿ...

ಷರತ್ತಿನೊಂದಿಗೆ ಕೆಲವು ಜಿಲ್ಲೆಗಳಲ್ಲಿ ಲಾಕ್​ಡೌನ್ ಸಡಿಲಿಕೆ : ​ ಕರ್ನಾಟಕ ಸರಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ

spot_img
- Advertisement -
- Advertisement -

ಬೆಂಗಳೂರು :ಎ.೨೭ ರಂದು ದೇಶದ ಪ್ರಧಾನಮಂತ್ರಿ ಮೋದಿಯವರೊಂದಿಗೆ ಸಭೆ ನಡೆದ ಬೆನ್ನಲ್ಲೇ ರಾಜ್ಯ ಸರ್ಕಾರ ಲಾಕ್​ಡೌನ್​ ಇನ್ನಷ್ಟು ಸಡಿಲಿಕೆಗೆ ಸಂಬಂಧಪಟ್ಟಂತೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಲಾಕ್​ಡೌನ್​ನಲ್ಲಿ ಈಗಾಗಲೇ ಸ್ವಲ್ಪ ಪ್ರಮಾಣದಲ್ಲಿ ಸಡಿಲಿಕೆ ಮಾಡಲಾಗಿದೆ.
ದೇಶದಲ್ಲಿ ಎರಡನೇ ಹಂತದ ಲಾಕ್​​ಡೌನ್​ ಅವಧಿ ಮೇ 3ಕ್ಕೆ ಮುಕ್ತಾಯವಾಗಬೇಕಿತ್ತು. ಆದರೆ ನಿನ್ನೆ ಪ್ರಧಾನಮಂತ್ರಿ ಮೋದಿಯವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್​ ಮೂಲಕ ಸಭೆ ನಡೆಸಿ, ಆಯಾ ರಾಜ್ಯಗಳಲ್ಲಿನ ಕೊವಿಡ್​ ನಿಯಂತ್ರಣ ಪರಿಸ್ಥಿತಿಯನ್ನು ಪರಾಮರ್ಶಿಸಿದ್ದಾರೆ.
ಅದಕ್ಕೆ ಪೂರಕವಾಗಿ ಕೆಲವು ಬದಲಾವಣೆಗಳೊಂದಿಗೆ ರಾಜ್ಯಸರ್ಕಾರ ಹೊಸ ಮಾರ್ಗಸೂಚಿಯನ್ನು ನೀಡಿದ್ದು, ಮುಂದಿನ ಆದೇಶದವರೆಗೆ ಇದು ಅನ್ವಯ ಆಗಲಿದೆ.
ಬೆಂಗಳೂರು ನಗರ, ಬೆಳಗಾವಿ, ಮೈಸೂರು, ವಿಜಯಪುರ, ಬಾಗಲಕೋಟೆ, ಕಲಬುರಗಿ, ಬೀದರ್​, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಲಾಕ್​ಡೌನ್​ನಲ್ಲಿ ಯಥಾ ಸ್ಥಿತಿಯಲ್ಲಿಯೇ ಮುಂದುವರಿಯಲಿದೆ.
ಚಾಮರಾಜನಗರ, ಕೊಪ್ಪಳ, ಚಿಕ್ಕಮಗಳೂರು, ರಾಯಚೂರು, ಚಿತ್ರದುರ್ಗ, ರಾಮನಗರ, ಹಾಸನ, ಶಿವಮೊಗ್ಗ, ಹಾವೇರಿ, ಯಾದಗಿರಿ, ಕೋಲಾರ, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಲಾಕ್​ಡೌನ್​ನಲ್ಲಿ ಹೆಚ್ಚಿನ ಸಡಿಲಿಕೆ ಮಾಡಿದ್ದು ಕೆಲವು ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ.
ಈ ಮೇಲಿನ ಜಿಲ್ಲೆಗಳಲ್ಲಿ ರಾಮನಗರ ಹೊರತು ಪಡಿಸಿ ಉಳಿದ ಎಲ್ಲ ಕಡೆ ಹಳ್ಳಿ ಪ್ರದೇಶಗಳಲ್ಲಿ ಇರುವ ಉತ್ಪಾದನಾ ಮತ್ತು ಕೈಗಾರಿಕಾ ಉದ್ಯಮಗಳನ್ನು ಪ್ರಾರಂಭಿಸಬಹುದು. ಶೇ.50ರಷ್ಟು ಕಾರ್ಮಿಕರು ಆಗಮಿಸಬೇಕು. ಆದರೆ ಮಾಸ್ಕ್, ಸ್ಯಾನಿಟೈಸರ್​ಗಳ ಬಳಕೆ ಕಡ್ಡಾಯ. ಹಾಗೇ ರಫ್ತು ಆಧಾರಿತ ಘಟಕಗಳಿಗೆ, ವಿಶೇಷ ಆರ್ಥಿಕ ವಲಯಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪ್ರವೇಶ ಮಾಡುವುದನ್ನು ನಿರ್ಬಂಧಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ.
ಬಳ್ಳಾರಿ, ಮಂಡ್ಯ, ಬೆಂಗಳೂರು ಗ್ರಾಮೀಣ ​, ಗದಗ, ತುಮಕೂರು, ಚಿಕ್ಕಬಳ್ಳಾಪುರ, ಉತ್ತರ ಕನ್ನಡ, ಧಾರವಾಡಗಳು ಸದ್ಯ ಗ್ರೀನ್​ ಝೋನ್​ನಲ್ಲಿ ಇವೆ. ಅಲ್ಲಿ ಎಲ್ಲ ಅಂಗಡಿಗಳನ್ನು ತೆರೆಯುವುದು, ಆರ್ಥಿಕ ಚಟುವಟಿಕೆಗಳನ್ನು ಪ್ರಾರಂಭ ಮಾಡುವುದು ಆಯಾ ಜಿಲ್ಲಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರ ವಿವೇಚನೆಗೆ ಬಿಡಲಾಗಿದೆ

- Advertisement -
spot_img

Latest News

error: Content is protected !!