Friday, May 3, 2024
Homeಕರಾವಳಿಲೋಕಾಯುಕ್ತ ಜನ ಸಂಪರ್ಕ ಸಭೆ; ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ಸಾರ್ವಜನಿಕರ ಅಹವಾಲು, ಅರ್ಜಿ ನಮೂನೆಗಳ ಸ್ವೀಕಾರ 

ಲೋಕಾಯುಕ್ತ ಜನ ಸಂಪರ್ಕ ಸಭೆ; ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ಸಾರ್ವಜನಿಕರ ಅಹವಾಲು, ಅರ್ಜಿ ನಮೂನೆಗಳ ಸ್ವೀಕಾರ 

spot_img
- Advertisement -
- Advertisement -

ಕಡಬ: ಕಡಬ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ 2023 ಡಿಸೆಂಬರ್ 13 ಬುಧವಾರದಂದು ಬೆಳಿಗ್ಗೆ 11 ಗಂಟೆಗೆ “ಲೋಕಾಯುಕ್ತ ಜನ ಸಂಪರ್ಕ ಸಭೆ’ಯನ್ನು ಆಯೋಜಿಸಲಾಗಿದೆ.

ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಈ ಕೆಳಗೆ ನಮೂದಿಸಿದ ದಿನದಂದು ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಕೋರಲಾಗಿದೆ.

ಇದಲ್ಲದೇ ಉಳಿದ ದಿನಗಳಲ್ಲೂ ಕಛೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದಾಗಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯುವಂತೆ ಕೋರಲಾಗಿದೆ.

ಅರ್ಜಿದಾರರು ನಮೂನೆ 1 & ॥ ರಲ್ಲಿ ಭರ್ತಿ ಮಾಡಿ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ ಕಛೇರಿಗೆ ಅಥವಾ ನೇರವಾಗಿ ಮಾನ್ಯ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ/ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ರವರಿಗೆ ಸಲ್ಲಿಸುವುದು.

ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆಗಳು:

ಪೊಲೀಸ್ ಅಧೀಕ್ಷಕರ ಕಛೇರಿ
0824-2950997
9364062517

ಪೊಲೀಸ್ ಉಪಾಧೀಕ್ಷಕರು-1 ಕಛೇರಿ
0824-2453420
9364062579

ಪೊಲೀಸ್ ಉಪಾಧೀಕ್ಷಕರು-2 ಕಛೇರಿ
0824-2453420
9364062580

ಪೊಲೀಸ್ ನಿರೀಕ್ಷಕರು-1 ಕಛೇರಿ
0824-2427237
9364062691

ಪೊಲೀಸ್ ನಿರೀಕ್ಷಕರು-2 ಕಛೇರಿ
0824-2427237
9364062692

- Advertisement -
spot_img

Latest News

error: Content is protected !!