- Advertisement -
- Advertisement -
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇಂದು ಲೋಕಾಯುಕ್ತ ದಾಳಿ ನಡೆದಿದೆ.
ಮಂಗಳೂರು, ಉಳ್ಳಾಲ, ಬಂಟ್ವಾಳ ಮತ್ತು ಕಾರ್ಕಳದಲ್ಲಿ ದಾಳಿ ನಡೆದಿದ್ದು, ಸರ್ವೇ ಇಲಾಖೆಯ ಅಧಿಕಾರಿಗಳ ಕಚೇರಿ ಮತ್ತು ನಿವಾಸಗಳಲ್ಲಿ ಪರಿಶೀಲನೆ ನಡೆದಿದೆ.
ಡಿಡಿಎಲ್ ಆರ್ ಮತ್ತು ಎಡಿಎಲ್ ಆರ್ ಗಳ ಕಚೇರಿ ಮತ್ತು ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ಸರ್ವೇ ಇಲಾಖೆ ಸಿಬ್ಬಂದಿ ಮನೆಗಳ ಮೇಲೂ ದಾಳಿ ನಡೆಸಲಾಗಿದೆ.
ಇಂದು ಬೆಳಗ್ಗೆಯೇ ಲೋಕಾಯುಕ್ತ ಎಸ್ಪಿ ನಟರಾಜ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಸಾರ್ವಜನಿಕರಿಂದ ಲಂಚ ಬೇಡಿಕೆ ಕುರಿತಂತೆ ದೂರುಗಳು ಬಂದಿದ್ದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ.
- Advertisement -