Wednesday, May 15, 2024
Homeಕರಾವಳಿಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಗಳಿಗೆ ಲೋಕಾಯಕ್ತ ಅಧಿಕಾರಿಗಳ ದಿಢೀರ್ ಭೇಟಿ

ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಗಳಿಗೆ ಲೋಕಾಯಕ್ತ ಅಧಿಕಾರಿಗಳ ದಿಢೀರ್ ಭೇಟಿ

spot_img
- Advertisement -
- Advertisement -

ಬೆಳ್ತಂಗಡಿ : ಮಂಗಳೂರು ಲೋಕಾಯಕ್ತ ಅಧಿಕಾರಿಗಳು ಇಂದು ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಗಳಿಗೆ ದಿಢೀರ್ ಭೇಟಿ ನೀಡಿದರು.  ತಾಲೂಕು ಸರಕಾರಿ ಆಸ್ಪತ್ರೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ, ತಾಲೂಕು ಕಚೇರಿಗೆ , ಶಿಶು ಮಂದಿರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಮೊದಲು ದಿಢೀರ್ ಭೇಟಿ‌ ನೀಡಿ ಆಸ್ಪತ್ರೆಯನ್ನು ಪರಿಶೀಲನೆ ‌ನಡೆಸಿದರು. ಈ ವೇಳೆ ಅಲ್ಲಿಯ ಅವ್ಯವಸ್ಥೆ ನೋಡಿ ಲೋಕಾಯಕ್ತ ಅಧಿಕಾರಿಗಳು ಗರಂ ಅಗಿ ಟಿ.ಹೆಚ್.ಓ ಕಲಾ ಮಧು ಮತ್ತು ವೈದ್ಯರನ್ನು ತರಾಟೆಗೆ ತೆಗೆದುಕೊಂಡರು. ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ವೈದ್ಯರು ಬಾರದೆ ಇರುವುದು ,ಶುಚಿತ್ವ ಇಲ್ಲದೆ ಇರುವುದನ್ನು ಗಮನಿಸಿ ಸರಿಪಡಿಸಲು ಸೂಚನೆ ನೀಡಿದ್ದಾರೆ, ಸರಕಾರಿ ಆಸ್ಪತ್ರೆಯ ಬಗ್ಗೆ ಹಲವು ದೂರುಗಳು ಇರುವ ಕಾರಣ ಸರಿಪಡಿಸಿದೇ ಇರುವ ಅಧಿಕಾರಿಗಳ ಮೇಲೆ‌ ಕ್ರಮ ಕೈಗೊಳ್ಳುವುದಾಗಿ ಲೋಕಾಯಕ್ತ ಅಧಿಕಾರಿಗಳು ತಿಳಿಸಿದ್ದಾರೆ.

ಬೆಳ್ತಂಗಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಕಚೇರಿಗೆ ಭೇಟಿ ನೀಡಿದ ಲೋಕಾಯಕ್ತ ಅಧಿಕಾರಿಗಳು ಅಲ್ಲಿ ತಿಂಗಳಿಗೆ ಐದು ಸಾವಿರ ಸಿಗುವ ಮಾತೃಶ್ರೀ ಯೋಜನೆಯಲ್ಲಿ ಹಣ ನೀಡದೆ ಇದ್ದ ಬಗ್ಗೆ ಲೋಕಾಯಕ್ತಕ್ಕೆ ದೂರು ಬಂದ ಹಿನ್ನಲೆಯಲ್ಲಿ ದಾಖಲೆಗಳನ್ನು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಇನ್ನು ಬೆಳ್ತಂಗಡಿ ಕೋರ್ಟ್ ರಸ್ತೆಯಲ್ಲಿರುವ ಶಿಶು ಮಂದಿರಕ್ಕೆ ಭೇಟಿ‌ ನೀಡಿ ಅಲ್ಲಿಯ ವ್ಯವಸ್ಥೆ ಬಗ್ಗೆ ಪರಿಶೀಲನೆ‌ ನಡೆಸಿದರು.

ಬೆಳ್ತಂಗಡಿ ತಾಲೂಕು ಕಚೇರಿಗೆ ಭೇಟಿ‌ ನೀಡಿ ಅಲ್ಲಿಯ ಎಲ್ಲಾ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಸಾರ್ವಜನಿಕರ ಕೆಲಸವನ್ನು ಸರಿಯಾಗಿ ಮಾಡಲು ಸೂಚಿಸಿದ್ದಾರೆ. ಬೆಳ್ತಂಗಡಿ ವಿವಿಧ ಇಲಾಖೆ ಭೇಟಿ ವೇಳೆ ಲೋಕಾಯಕ್ತ ಎಸ್ಪಿ ಕುಮಾರಸ್ವಾಮಿ, ಡಿವೈಎಸ್ಪಿ ಕಲಾವತಿ , ಡಿವೈಎಸ್ಪಿ ಚೆಲುವರಾಜ್, ಇನ್ಸ್‌ಪೆಕ್ಟರ್ ಅಮಾನುಲ್ಲಾ ಹಾಗೂ ಸಿಬ್ಬಂದಿ  ಗಾಯತ್ರಿ ಚಾಲಕರಾದ ಮಹೇಶ್, ದೊಡಣ್ಣ, ನವೀನ್ ಇದ್ದರು.

- Advertisement -
spot_img

Latest News

error: Content is protected !!