- Advertisement -
- Advertisement -
ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ಪಟ್ಟಣದ ಹೊರ ಭಾಗದಲ್ಲಿ ಕಟ್ಟಿಗೆ ಸಾಗಾಟ ಮಾಡುತ್ತಿದ್ದ ಎರಡು ಟ್ರ್ಯಾಕ್ಟರ್ಗಳಿಗೆ ಲಾರಿಯೊಂದು ಡಿಕ್ಕಿ ಹೊಡೆದಿರುವಂತಹ ಘಟನೆ ನಡೆದಿದೆ .
ಲಾರಿ ಡಿಕ್ಕಿಯಾಗಿ 2 ಟ್ರ್ಯಾಕ್ಟರ್ಗಳು ಪಲ್ಟಿಯಾಗಿ ಚಾಲಕರಿಗೆ ಗಾಯವಾಗಿದ್ದು , ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಲಾರಿ ಚಾಲಕನ ಅಜಾಗರೂಕತೆಯೇ ಈ ಅವಘಡಕ್ಕೆ ಕಾರಣವೆಂದು ಆರೋಪ ಮಾಡಲಾಗಿದೆ. ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ .
- Advertisement -