- Advertisement -
- Advertisement -
ಕಾಸರಗೋಡು: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ತೋಡಿಗೆ ಬಿದ್ದು ಓರ್ವ ಸಾವನ್ನಪ್ಪಿರುವ ಘಟನೆ ಕಾಸರಗೋಡಿನ ನೀಲೇಶ್ವರ ಪರಪಚ್ಚಾಲ್ ನಲ್ಲಿ ನಡೆದಿದೆ. ಪಾಲಕ್ಕಾಡ್ ಮಣ್ಣರಕ್ಕಾಡ್ ನ ಹಬೀಬ್ (50) ಮೃತಪಟ್ಟವರು.ಚಾಲಕ ರಹೀಮ್ ಗಾಯಗೊಂಡಿದ್ದಾರೆ.
ನೀಲೇಶ್ವರ ಕಡೆಗೆ ಸಿಮೆಂಟ್ ಹೇರಿಕೊಂಡು ತೆರಳುತ್ತಿದ್ದ ಲಾರಿ ಪರಪ್ಪಚ್ಚಾಲ್ ನ ಸೇತುವೆ ಯಿಂದ ತೋಡಿಗೆ ಬಿದ್ದಿದ್ದು, ಲಾರಿಯಲ್ಲಿ ಸಿಲುಕಿದ್ದ ಇಬ್ಬರನ್ನು ಸ್ಥಳೀಯರು ಹಾಗೂ ಅಗ್ನಿ ಶಾಮಕದಳದ ಸಿಬ್ಬಂದಿ ಮೇಲಕ್ಕೆತ್ತಿ ಆಸ್ಪತ್ರೆಗೆ ಸಾಗಿಸಿದರೂ, ಹಬೀಬ್ ಮೃತಪಟ್ಟಿದ್ದರು ಎಂದು ತಿಳಿದುಬಂದದೆ.ಈ ಬಗ್ಗೆ ನೀಲೇಶ್ವರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -