Sunday, April 28, 2024
Homeಕರಾವಳಿಚಾರ್ಮಾಡಿ ಘಾಟ್ ನಲ್ಲಿ ಮಂಜಿನಿಂದ ರಸ್ತೆ ಕಾಣದೇ ಬಂಡೆಗಲ್ಲಿಗೆ ಗುದ್ದಿದ ಲಾರಿ

ಚಾರ್ಮಾಡಿ ಘಾಟ್ ನಲ್ಲಿ ಮಂಜಿನಿಂದ ರಸ್ತೆ ಕಾಣದೇ ಬಂಡೆಗಲ್ಲಿಗೆ ಗುದ್ದಿದ ಲಾರಿ

spot_img
- Advertisement -
- Advertisement -

ಬೆಳ್ತಂಗಡಿ: ಮಂಜು ಕವಿದಿದ್ದ ಕಾರಣ ರಸ್ತೆ ಕಾಣದೇ ಚಾರ್ಮಾಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಬಂಡೆಗಲ್ಲಿಗೆ ಗುದ್ದಿ ಅಪಘಾತ ನಡೆದಿದೆ.

ರಸ್ತೆ ಬದಿಯಲ್ಲಿದ್ದ ಬಂಡೆಗೆ ಗುದ್ದಿದ ಕಾರಣ ಲಾರಿಯ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಚಾರ್ಮಾಡಿ ಘಾಟ್ ನ ಆರನೇ ತಿರುವಿನಲ್ಲಿ ಅಪಘಾತ ಸಂಭವಿಸಿದೆ.

ಅಪಘಾತಕ್ಕೀಡಾದ ಲಾರಿ ಚಿಕ್ಕಮಗಳೂರಿನಿಂದ ಗೊಬ್ಬರ ತುಂಬಿಕೊಂಡು ಮಂಗಳೂರಿಗೆ ತೆರಳುತ್ತಿದ್ದು, ಲಾರಿ ಚಾಲಕ ಮತ್ತು ಕ್ಲೀನರ್ ಗೆ ಸಣ್ಣಪುಟ್ಟ ಗಾಯಗಳಾಗಿವೆ.

ಗಾಯಾಳುಗಳು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದು, ಬೆಳ್ತಂಗಡಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

- Advertisement -
spot_img

Latest News

error: Content is protected !!