- Advertisement -
- Advertisement -
ಬೆಳ್ತಂಗಡಿ: ಮಂಜು ಕವಿದಿದ್ದ ಕಾರಣ ರಸ್ತೆ ಕಾಣದೇ ಚಾರ್ಮಾಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಬಂಡೆಗಲ್ಲಿಗೆ ಗುದ್ದಿ ಅಪಘಾತ ನಡೆದಿದೆ.
ರಸ್ತೆ ಬದಿಯಲ್ಲಿದ್ದ ಬಂಡೆಗೆ ಗುದ್ದಿದ ಕಾರಣ ಲಾರಿಯ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಚಾರ್ಮಾಡಿ ಘಾಟ್ ನ ಆರನೇ ತಿರುವಿನಲ್ಲಿ ಅಪಘಾತ ಸಂಭವಿಸಿದೆ.
ಅಪಘಾತಕ್ಕೀಡಾದ ಲಾರಿ ಚಿಕ್ಕಮಗಳೂರಿನಿಂದ ಗೊಬ್ಬರ ತುಂಬಿಕೊಂಡು ಮಂಗಳೂರಿಗೆ ತೆರಳುತ್ತಿದ್ದು, ಲಾರಿ ಚಾಲಕ ಮತ್ತು ಕ್ಲೀನರ್ ಗೆ ಸಣ್ಣಪುಟ್ಟ ಗಾಯಗಳಾಗಿವೆ.
ಗಾಯಾಳುಗಳು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದು, ಬೆಳ್ತಂಗಡಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.
- Advertisement -