ಮಂಗಳೂರು: ಮುಸ್ಲಿಂ ಯುವಕನೊಬ್ಬ ತಾನೂ ಹಿಂದೂ ಎಂದು ನಂಬಿಸಿ ಮಂಗಳೂರಿನ ಯುವತಿಯೋರ್ವಳಿಗೆ ಲವ್ ಜಿಹಾದ್ ಹೆಸರಿನಲ್ಲಿ ಮೋಸ ಮಾಡಿರುವ ಘಟನೆ ಸುರತ್ಕಲ್ ನಲ್ಲಿ ನಡೆದಿದೆ.
ಆರೋಪಿಯನ್ನು ಇಬ್ರಾಹಿಂ ಎಂದು ಹೇಳಲಾಗಿದೆ. ಬೈಕಂಪಾಡಿಯ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಈತ ಮಂಗಳೂರಿನ ಯುವತಿಯೋರ್ವಳಿಗೆ ಲವ್ ಜಿಹಾದ್ ಹೆಸರಿನಲ್ಲಿ ಮೋಸ ಮಾಡಿದ್ದಲ್ಲದೆ, ಇಸ್ಲಾಂಗೆ ಮತಾಂತರವಾಗುವಂತೆ ಪೀಡಿಸಿ, ಇದೀಗ ಇಬ್ಬರ ಜೊತೆಗಿನ ಫೋಟೋಗಳನ್ನು ತೋರಿಸಿ ಮತಾಂತರವಾಗದಿದ್ದಲ್ಲಿ ಅತ್ಯಾಚಾರವೆಸಗುವುದಾಗಿ ಬೆದರಿಕೆಯೊಡ್ಡಿದ್ದಾನೆ ಹಾಗೂ ಯುವತಿಯ ಜೊತೆ ಅಸಭ್ಯ ರೀತಿಯಲ್ಲಿ ವರ್ತಿಸಿ ಕಿರುಕುಳ ನೀಡಿದ್ದಾನೆ.
ಪ್ರಕರಣದ ಸಂಬಂಧ ಅನ್ಯಾಯಕ್ಕೊಳಗಾದ ಹಿಂದೂ ಯುವತಿ ತಂಗಾಳದ ಅನ್ಯಾಯದ ಬಗ್ಗೆ ಹೇಳಿಕೊಂಡಿದ್ದು, ಸಂತ್ರಸ್ತ ಯುವತಿಗೆ ನ್ಯಾಯ ಕೊಡಿಸಲು ರಾಮ್ ಸೇನಾ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಆರೋಪಿ ಇಬ್ರಾಹಿಂ ಎಂಬ ಮುಸ್ಲಿಂ ಯುವಕನ ವಿರುದ್ಧ ದೂರು ದಾಖಲಿಸಿದ್ದಾರೆ.
ಪ್ರಕರಣದ ಕುರಿತು ಮಾತನಾಡಿದ ರಾಮ್ ಸೇನಾ ದ. ಕ. ಜಿಲ್ಲಾಧ್ಯಕ್ಷರಾದ ಕಿರಣ್ ಅಮೀನ್ ಉರ್ವಸ್ಟೋರ್, ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಇಂತಹ ಕೃತ್ಯಗಳು ಹೆಚ್ಚಾಗಿ ಕಂಡುಬರುತ್ತಿದ್ದು ಪೊಲೀಸ್ ಇಲಾಖೆಯು ಇದರ ವಿರುದ್ಧ ಗಮನಹರಿಸಬೇಕು. ಜೊತೆಗೆ ಅನ್ಯಕೋಮಿನ ಯುವಕರಿಗೆ ಪದೇ ಪದೇ ಹಿಂದೂ ಸಮಾಜವನ್ನು ಕೆಣಕುವ ದುಸ್ಸಾಹಸ ಮಾಡದಂತೆ ಹಾಗೂ ಒಂದು ವೇಳೆ ಮಾಡಿದರೆ ಮುಂದೆ ಬರುವ ಎಲ್ಲಾ ಸಮಸ್ಯೆಗಳನ್ನು ನೀವೇ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ರಾಮ್ ಸೇನಾ ದ. ಕ. ಜಿಲ್ಲಾ ಮುಖಂಡರುಗಳು, ಮುಲ್ಕಿ ತಾಲ್ಲೂಕು ಮುಖಂಡರುಗಳು, ಹಾಗೂ ರಾಮ್ ಸೇನಾ ಕಾರ್ಯಕರ್ತರು ಕಾನೂನು ಪ್ರಕ್ರಿಯೆ ಮುಗಿಯುವವರೆಗೂ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಉಪಸ್ಥಿತರಿದ್ದರು ಎಂದು ತಿಳಿದುಬಂದಿದೆ. ಅಲ್ಲದೇ ಪ್ರಕರಣ ಸಂಬಂಧ ಸಹಕರಿಸಿದ ಬಜರಂಗದಳ ಸುರತ್ಕಲ್ ಪ್ರಖಂಡದ ಕಾರ್ಯಕರ್ತರಿಗೆ ಹಾಗೂ ತಕ್ಷಣವೇ ಆರೋಪಿಯನ್ನು ಬಂಧಿಸಿದ ಪೊಲೀಸ್ ಸಿಬ್ಬಂದಿಗಳ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.