Monday, May 13, 2024
Homeಅಪರಾಧಪ್ರೇಮಿಗಳಿಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಪ್ರೇಮಿಗಳಿಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

spot_img
- Advertisement -
- Advertisement -

ಮಂಡ್ಯ: ಅಪ್ರಾಪ್ತ ವಯಸ್ಸಿನ ಪ್ರೇಮಿಗಳಿಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲೂಕಿನ ಕೆರಗೋಡು ಹೊಬಳಿ ಹಂಪಾಪುರ ಗ್ರಾಮದ ಬಳಿಯ ನಿರ್ಜನ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಗ್ರಾಮದ ಬೋಜಯ್ಯ ಪುತ್ರಿ ಧನಲಕ್ಷ್ಮಿ(15) ಹಾಗೂ ಅದೇ ಗ್ರಾಮದ ನಾಗೇಶ್ ಎಂಬುವರ ಪುತ್ರ ಶ್ರೀನಿವಾಸ್ (20) ಮೃತ ಪ್ರೇಮಿಗಳು.

ಮೃತರಿಬ್ಬರು ಒಂದೇ ಗ್ರಾಮದವರಾಗಿದ್ದು, ಅನ್ಯಧರ್ಮದವರಾಗಿದ್ದ ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರು ಎಂದು ತಿಳಿದು ಬಂದಿದೆ. ಶ್ರೀನಿವಾಸ್ ವಿದ್ಯಾಭ್ಯಾಸ ಮೊಟಕುಗೊಳಿಸಿದ್ದ. ಆದರೆ, ಧನಲಕ್ಷ್ಮಿ 9ನೇ ತರಗತಿ ಮುಗಿಸಿ ಎಸ್ಸೆಸ್ಸೆಲ್ಸಿಗೆ ಹೋಗಬೇಕಿತ್ತು. ಈ ಇಬ್ಬರು ಪ್ರೀತಿಸುತ್ತಿರುವ ವಿಚಾರ ಮನೆಯವರಿಗೆ ತಿಳಿದಿರಲಿಲ್ಲ. ಇಬ್ಬರು ಮನೆಯವರ ಪೋಷಕರನ್ನು ವಿಚಾರಿಸಿದಾಗ ಪ್ರೀತಿ ವಿಚಾರ ತಿಳಿಸಿರಲಿಲ್ಲ. ಯಾಕೆ ಹೀಗೆ ಮಾಡಿಕೊಂಡಿದ್ದಾರೆ ಎಂಬುದಕ್ಕೆ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಕೆರಗೋಡು ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!