- Advertisement -
- Advertisement -
ಬೆಂಗಳೂರು: ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಲು ತೀರ್ಮಾನಿಸಿರುವ ವಿಧಾನಪರಿಷತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ನಾಯಕ ಎಂ ಡಿ ಲಕ್ಷ್ಮೀ ನಾರಾಯಣ ಇಂದು ತಮ್ಮ ಅಭಿಮಾನಿಗಳ ಜೊತೆ ಸಭೆ ನಡೆಸಿದರು.
ಬೆಂಗಳೂರಿನ ಶಾಸಕರ ಭವನದಲ್ಲಿ ಅಭಿಮಾನಿಗಳ ಜೊತೆ ಸಭೆ ನಡೆಸಿದ ಎಂ.ಡಿ.ಲಕ್ಷ್ಮೀ ನಾರಾಯಣ, ಇಂದು ಅಧಿಕೃತ ಕಾಂಗ್ರೆಸ್ ತೊರೆಯುವ ನಿರ್ಧಾರ ಮಾಡಿದ್ದಾರೆ. ಶೀಘ್ರದಲ್ಲೇ ಬಿಜೆಪಿಗೆ ಸೇರಲು ತೀರ್ಮಾನ ಮಾಡಿದ್ದು, ಒಂದೊಮ್ಮೆ ಬಿಜೆಪಿಯಲ್ಲಿ ತೀವ್ರ ವಿರೋಧ ಎದುರಾದರೆ ಆಮ್ ಆದ್ಮಿ ಪಕ್ಷವನ್ನು ಸೇರುವ ಆಯ್ಕೆಯನ್ನು ಅವರು ಸಹ ಇಟ್ಟುಕೊಂಡಿದ್ದಾರೆ.
- Advertisement -