- Advertisement -
- Advertisement -
ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಯು ಆದಿತ್ಯವಾರ ಗೊನೆ ಕಡಿದು, ಫೆ.5 ರ ಶನಿವಾರ ರಾತ್ರಿ 9 ಗಂಟೆಗೆ ಭಂಡಾರಯೇರಿ, ಫೆ.6 ರ ಆದಿತ್ಯವಾರ ಬೆಳಿಗ್ಗೆ 9 ಗಂಟೆಗೆ ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಯು ನೆರವೇರಿತು. ಹಾಗೇ ಸಂಜೆ 4 ರಿಂದ ಶ್ರಿ ಗುಡ್ಡೆ ಚಾಮುಂಡಿ- ಪಂಜುರ್ಲಿ ದೈವಗಳ ನೇಮ ಜರಗಿತು.







ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು, ಮಾಜಿ ಸಚಿವ ಬಿ.ರಮಾನಾಥ ರೈ ಸಹಿತ ಅನೇಕರು ಆಗಮಿಸಿ ದೈವದ ಗಂಧ ಪ್ರಸಾದವನ್ನು ಸ್ವೀಕರಿಸಿದರು. ಆಡಳಿತ ಮೋಕ್ತೇಸರ ಮಾಣಿ ಗುತ್ತು ಸಚಿನ ರೈ ಸಹಿತ ಎಲ್ಲಾ ಗುತ್ತಿನ ಪ್ರಮುಖರು ಉಪಸ್ಥಿತರಿದ್ದರು.
- Advertisement -