- Advertisement -
- Advertisement -
ಮಂಗಳೂರು: ಬಾಲಕನೋರ್ವನಿಗೆ ಮದರಸದ ಶಿಕ್ಷಕನೋರ್ವ ಮನ ಬಂದಂತೆ ಥಳಿಸಿರುವ ಘಟನೆ ಹರೇಕಳ ಗ್ರಾಮದ ದೇರಿಕಟ್ಟೆ ಎಂಬಲ್ಲಿ ನಡೆದಿದೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೇರಿಕಟ್ಟೆ ಮಹಮ್ಮದ್ ಎಂಬವರ ಪುತ್ರ ಹಫೀಲ್ ಅಹಮ್ಮದ್ (11) ಎಂಬ ಬಾಲಕನಿಗೆ ಶಿಕ್ಷಕ ಉಸ್ತದ್ ಯಹ್ಯಾ ಫೈಝಿ ಹಲ್ಲೆ ನಡೆಸಿದ್ದಾರೆ.
ಇನ್ನು ಮದರಸಾಕ್ಕೆ ತೆರಳಿದ್ದ ಬಾಲಕನಿಗೆ ಕ್ಷುಲ್ಲಕ ವಿಚಾರಕ್ಕೆ ಶಿಕ್ಷಕ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ.ಈ ಕುರಿತು ಬಾಲಕನ ಹೆತ್ತವರು ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
- Advertisement -