Friday, June 27, 2025
Homeತಾಜಾ ಸುದ್ದಿಬೆಂಗಳೂರಿನಲ್ಲಿ ಯುವತಿಯನ್ನು ಕೊಲೆಗೈದು ಫ್ರಿಡ್ಜ್ ನಲ್ಲಿಟ್ಟ ಪ್ರಕರಣ; ಹಂತಕರ ಮನಸ್ಥಿತಿ ಕಂಡು ಬೆಚ್ಚಿ ಬಿದ್ದ ಪೊಲೀಸರು

ಬೆಂಗಳೂರಿನಲ್ಲಿ ಯುವತಿಯನ್ನು ಕೊಲೆಗೈದು ಫ್ರಿಡ್ಜ್ ನಲ್ಲಿಟ್ಟ ಪ್ರಕರಣ; ಹಂತಕರ ಮನಸ್ಥಿತಿ ಕಂಡು ಬೆಚ್ಚಿ ಬಿದ್ದ ಪೊಲೀಸರು

spot_img
- Advertisement -
- Advertisement -

ಬೆಂಗಳೂರಿನ ವೈಯಾಲಿಕಾವಲ್ ನಲ್ಲಿ ಯುವತಿಯನ್ನು ಕೊಲೆಗೈದು ಫ್ರಿಡ್ಜ್ ನಲ್ಲಿಟ್ಟ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಹಂತಕರ ಮನಸ್ಥಿತಿಯನ್ನು ಕಂಡು ಬೆಚ್ಚಿ ಬಿದ್ದಿದ್ದಾರೆ.

ದೆಹಲಿಯ ಶ್ರದ್ಧಾ ವಾಕರ್ ಮಾದರಿಯ ಮಹಾಲಕ್ಷ್ಮೀ ಮರ್ಡರ್ ಮಾಡಲಾಗಿದ್ದು,  ಕೇವಲ ಸಿಂಗಲ್ ಡೋರ್ ಫ್ರಿಡ್ಜ್ ನಲ್ಲಿ ತುಂಡರಿಸಿದಂತ ಮಹಾಲಕ್ಷ್ಮೀಯ ದೇಹದ 50 ಪೀಸ್ ಗಳನ್ನು ಜೋಡಿಸಿಟ್ಟಿದ್ದನ್ನು ಕಂಡ ಪೊಲೀಸರು ಹಾಗೂ ಕುಟುಂಬಸ್ಥರು ಶಾಕ್ ಆಗಿದ್ದಾರೆ.

ನಿನ್ನೆ ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು, ಕುಟುಂಬಸ್ಥರು ಭೇಟಿ ನೀಡಿದಾಗ ಫ್ರಿಡ್ಜ್ ನಲ್ಲಿದ್ದಂತ 50 ಪೀಸ್ ಪೀಸ್ ಮೃತ ದೇಹವನ್ನು ಕಂಡು ಶಾಕ್ ಆಗಿದ್ದಾರೆ. ಮಹಾಲಕ್ಷ್ಮಿ ಕೊಲೆ ಮಾಡಿದ  ಹಂತಕರು, ದೇಹವನ್ನು ಮೂರು ಭಾಗವಾಗಿ ಕತ್ತರಿಸಿ, 50 ಪೀಸ್ ಪೀಸ್ ಮಾಡಿ, ಸಿಂಗಲ್ ಡೋರ್ ಫ್ರಿಡ್ಜ್ ನಲ್ಲಿ ಹುದುಗಿಸಿಟ್ಟಿದ್ದಾರೆ. ಮೊದಲ ಹಂತದ ಫ್ರಿಡ್ಜ್ ನಲ್ಲಿ ಕೈ ಕಾಲು, ಎದೆ ಮೂಳೆಯನ್ನು ಇರಿಸಿದ್ದರೇ, ಮಧ್ಯದ ಹಂತದಲ್ಲಿ ಕಾಲಿನ ಮೂಳೆ, ಮಾಂಸದ ಪೀಸ್ ಗಳನ್ನು ಇಟ್ಟಿದ್ದರಂತೆ. ಕೊನೆಯ ಹಂತದಲ್ಲಿ ಪಾತ್ರೆಯಲ್ಲಿ ಮಹಾಲಕ್ಷ್ಮಿ ತಲೆಯನ್ನು ಇಟ್ಟಿದ್ದಾರಂತೆ.

ಇನ್ನೂ ಕಪ್ಪು ಕವರ್ ನಲ್ಲಿ ಕರುಳು, ಲಿವರ್ ಗಳನ್ನು ಕಟ್ಟಿ ಫ್ರಿಡ್ಜ್ ನಲ್ಲಿ ಹಂತ ಹಂತವಾಗಿ ಸಂಪೂರ್ಣ ಜಾಗವೇ ಇಲ್ಲದಂತೆ ಮಹಾಲಕ್ಷ್ಮಿ ದೇಹವನ್ನು ಇರಿಸಿದ್ದರಂತೆ. ಈಗ ಬೌರಿಂಗ್ ಆಸ್ಪತ್ರೆಗೆ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ದಾಗ, ವೈದ್ಯರೇ ಈ ಪೀಸ್ ಪೀಸ್ ದೇಹವನ್ನು ಜೋಡಿಸಿ ಮರಣೋತ್ತರ ಪರೀಕ್ಷೆ ನಡೆಸೋದು ಹೇಗೆ ಎನ್ನುವ ಚಿಂತೆಗೆ ಒಳಗಾಗಿದ್ದರು ಎನ್ನಲಾಗಿದೆ.

ಮಹಾಲಕ್ಷ್ಮೀಯ ಸಹೋದ್ಯೋಗಿಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪತಿ

ಮಹಾಲಕ್ಷ್ಮೀಯ ಪತಿ ಹೇಮಂತ್ ಪತ್ನಿಯನ್ನು ಆಕೆಯ ಜೊತೆ ಕೆಲಸ ಮಾಡುತ್ತಿದ್ದ ನಾಲ್ವರು ಸಹೋದ್ಯೋಗಿಗಳು ಕೊಲೆ ಮಾಡಿದ್ದಾರೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಮುಕ್ತ, ಶಶಿಧರ್ ಮತ್ತು ಸುನೀಲ್ ಮೃತ ಮಹಾಲಕ್ಷ್ಮಿಯ ಸಹೋದ್ಯೋಗಿಗಳು. ಉತ್ತರಾಖಂಡ್ ಮೂಲದ ಅಶ್ರಫ್ ಮಹಾಲಕ್ಷ್ಮಿ ಜೊತೆ ಸಲುಗೆಯಿಂದ ಇದ್ದನು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಮಹಾಲಕ್ಷ್ಮಿ ತಾನು ಕೆಲಸ ಮಾಡುವ ಕಂಪನಿಯಲ್ಲಿ ಜಗಳ ಮಾಡಿಕೊಂಡಿದ್ದಳು ಎಂದು ಮಾಹಿತಿ ನೀಡಿದ್ದಾರೆ.

ಮಹಾಲಕ್ಷ್ಮೀ ಸ್ನೇಹಿತ ಅಶ್ರಫ್‌ ಮೇಲೆ ನನಗೆ ಅನುಮಾನ ಇದೆ. ಈ ಹಿಂದೆ ನಾನು ನೆಲಮಂಗಲದಲ್ಲಿ ಅಶ್ರಫ್‌ ವಿರುದ್ಧ ದೂರು ಕೊಟ್ಟಿದ್ದೆ. ಅಶ್ರಫ್ ಉತ್ತರಾಖಂಡ್ ಮೂಲದವನು. ಒಂದು ದಿನ ಮಹಾಲಕ್ಷ್ಮೀ ಮೊಬೈಲ್​ ಚೆಕ್ ಮಾಡಿದಾಗ ಅಶ್ರಫ್‌ ಜೊತೆ ಸಂಪರ್ಕದಲ್ಲಿರುವುದು ತಿಳಿಯಿತು ಎಂದು ಕೊಲೆಯಾದ ಮಹಾಲಕ್ಷ್ಮೀ ಪತಿ ಹೇಮಂತ್ ದಾಸ್ ಹೇಳಿದ್ದಾರೆ.

ನೆಲಮಂಗಲದಲ್ಲಿ ನಾನು ಮೊಬೈಲ್‌ ಶಾಪ್‌ ಇಟ್ಟುಕೊಂಡಿದ್ದೇನೆ. ಮೊಬೈಲ್‌ ಶಾಪ್‌ನಲ್ಲೇ ಮಗುವನ್ನು ನೋಡಿಕೊಂಡು ವಾಪಸ್‌ ಹೋಗುತ್ತಿದ್ದಳು. 25 ದಿನಗಳ ಹಿಂದೆ ಮೊಬೈಲ್‌ ಶಾಪ್‌ಗೆ ಬಂದು ಮಗುವನ್ನು ನೋಡಿ ಹೋಗಿದ್ದಳು. ಮಗು ನೋಡಲು ಬಂದಾಗ ನನ್ನ ಜೊತೆ ಕೋಪದಲ್ಲೇ ಮಾತನಾಡುತ್ತಿದ್ದಳು ಎಂದು ಹೇಳಿದರು.

- Advertisement -
spot_img

Latest News

error: Content is protected !!