ಮುಂಬೈ: ಸುಶಾಂತ್ ಸಿಂಗ್ ರಜಪೂತ್. ಸದ್ಯ ದೇಶದಲ್ಲಿ ಕೋವಿಡ್-19 ಅನಾಹುತಗಳನ್ನೂ ಮೀರಿ ಸಾಮಾಜಿಕ ಜಾಲತಾಣದ ಬಿಸಿ ಚರ್ಚೆಯ ವಿಷಯವಾಗಿರುವ ವ್ಯಕ್ತಿ. ಸುಶಾಂತ್ ಸಿಂಗ್ ಸಾವು ಸದ್ಯ ರಾಷ್ಟ್ರ ರಾಜಕಾರಣದ ಕೇಂದ್ರಬಿಂದುವಾಗಿದ್ದು, ಪ್ರಕರಣದ ಹಿಂದಿನ ಕಾರಣ ಮತ್ತು ತನಿಖೆಯ ಕುರಿತು ಪರಸ್ಪರ ಕೆಸರೆರಚಾಟದ ವಿಷಯವಾಗಿ ಬದಲಾಗಿದೆ.
ಬಾಲಿವುಡ್ ನಟರಾಗಿದ್ದ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಮತ್ತು ಉಡುಪಿ ಮೂಲದ ದಿಶಾ ಸಾಲಿಯಾನ್ ಅವರನ್ನು ರೇಪ್ ಮಾಡಿ ಕೊಲೆ ಮಾಡಲಾಗಿದೆ. ಎಂದು ಮಹಾರಾಷ್ಟ್ರದ ಮಾಜಿ ಸಿಎಂ ನಾರಾಯಣ್ ರಾಣೆ ಆರೋಪಿಸಿದ್ದಾರೆ.
ದಿಶಾ ಸಾಲಿಯಾನ್ ಅವರ ಗುಪ್ತಾಂಗಗಳ ಮೇಲೆ ಗಾಯಗಳಾಗಿದ್ದ ಬಗ್ಗೆ ದಿಶಾ ಅವರ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಉಲ್ಲೇಖವಾಗಿದೆ ಎಂದು ನಾರಾಯಣ್ ರಾಣೆ ಎಂದು ತಿಳಿಸಿದ್ದಾರೆ.
ದಿಶಾ ಸಾಲಿಯಾನ್ ಮತ್ತು ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣಗಳ ತನಿಖೆಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ. ತಪ್ಪಿತಸ್ಥರನ್ನು ರಕ್ಷಿಸಲು ಶಿವಸೇನೆ-ಕಾಂಗ್ರೆಸ್ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಯತ್ನಿಸುತ್ತಿದೆ. ಹಾಗೆಯೆ ದಿಶಾ ಅವರ ಕುಟುಂಬ ವರ್ಗ ಆಕೆಯ ಸಾವಿನ ಬಗ್ಗೆ ತನಿಖೆ ನಡೆಸದಂತೆ ಮನವಿ ಮಾಡಿಕೊಳ್ಳುತ್ತಿದೆ. ಇದಕ್ಕೆ ಕಾಣದ ಕೈಗಳ ಒತ್ತಡವೇ ಕಾರಣ ಎಂದು ನಾರಾಯಣ್ ರಾಣೆ ಆರೋಪಿಸಿದರು.
ಬಾಲಿವುಡ್ ನಟ ಡಿನೋ ಮೋರಿಯಾ ಅವರ ಮನೆಯಲ್ಲಿ ಜೂ.13ರಂದು ಪಾರ್ಟಿ ಆಯೋಜನೆಗೊಂಡಿತ್ತು. ಈ ಪಾರ್ಟಿಯಲ್ಲಿ ರಾಜಕಾರಣಿಯೊಬ್ಬರು ಪಾಲ್ಗೊಂಡಿದ್ದರು. ಪಾರ್ಟಿ ಮುಗಿದ ಬಳಿಕ ಎಲ್ಲರೂ ಸುಶಾಂತ್ ಸಿಂಗ್ ರಜಪೂತ್ ಮನೆಗೆ ಹೋಗಿದ್ದರು ಎಂದು ಹೇಳಿದ್ದಾರೆ.