- Advertisement -
- Advertisement -
ಮುಂಬೈ: ಮಹಾರಾಷ್ಟ್ರದ ತೀವ್ರ ಕೋವಿಡ್ ಪರಿಸ್ಥಿತಿಯ ಮಧ್ಯೆ ಸಂಪೂರ್ಣ ಲಾಕ್ ಡೌನ್ ಮಾಡಿರುವ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸರ್ಕಾರ ಬುಧವಾರ ರಾತ್ರಿ 8 ರಿಂದ 15 ದಿನಗಳವರೆಗೆ ಸೆಕ್ಷನ್ 144 ಅನ್ನು 15 ದಿನಗಳವರೆಗೆ ವಿಧಿಸಲಿದೆ ಎಂದು ಹೇಳಿದರು.
ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸುತ್ತಿದ್ದೇವೆ. ನಾಳೆಯಿಂದ ರಾಜ್ಯಾದ್ಯಂತ ಸೆಕ್ಷನ್ 144 ಜಾರಿಗೊಳಿಸಲಾಗುತ್ತಿದೆ. ಇದನ್ನು ಲಾಕ್ ಡೌನ್ ಎಂದು ಕರೆಯುವುದಿಲ್ಲ ಎಂದು ರಾಜ್ಯವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಉದ್ದವ್ ಠಾಕ್ರೆ ತಿಳಿಸಿದರು.
ಕೋವಿಡ್ ಗೆ ನೆರವಾಗಲು ಬಯಸುತ್ತಾರಾ ಅಥವಾ ಸೋಂಕು ನಿಯಂತ್ರಿಸಲು ಕೆಲಸ ನಿರ್ವಹಿಸುತ್ತಿರುವ ಸರ್ಕಾರದೊಂದಿಗೆ ಕೈ ಜೋಡಿಸುತ್ತಾರಾ ಎಂಬುದನ್ನು ಜನರು ನಿರ್ಧರಿಸಬೇಕಾಗಿದೆ ಎಂದು ಹೇಳಿದ ಮುಖ್ಯಮಂತ್ರಿ, ಸ್ಥಳೀಯ ರೈಲು ಸೇವೆ ಸೇರಿದಂತೆ ಸಾರ್ವಜನಿಕ ಸಾರಿಗೆ ಸೇವೆಯನ್ನು ಸ್ಥಗಿತಗೊಳಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
- Advertisement -