- Advertisement -
- Advertisement -
ಮಂಗಳೂರಿನ ಮಹೇಶ್ ಬಸ್ ನ ಮಾಲೀಕ ಪ್ರಕಾಶ್ ಶೇಖ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರಕಾಶ್ ತಾವು ವಾಸವಿದ್ದ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಹೇಶ್ ಬಸ್ ಸಾಕಷ್ಟು ಖ್ಯಾತಿ ಗಳಿಸಿದ್ದು, ಪ್ರಕಾಶ್ ಸಾವು ಅನೇಕರಲ್ಲಿ ಬೇಸರ ಮೂಡಿಸಿದೆ.
ಬಸ್ ಉದ್ಯಮದ ಬಗ್ಗೆ ಭಾರೀ ಪ್ರೀತಿ ಇಟ್ಟುಕೊಂಡಿದ್ದ ಪ್ರಕಾಶ್ ಯಾಕೆ ಹೀಗೆ ಮಾಡಿಕೊಂಡರು ಎಂದು ಅನೇಕರು ಶಾಕ್ ಆಗಿದ್ದಾರೆ. ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -