Friday, April 26, 2024
Homeಇತರನವೆಂಬರ್ ನಿಂದ ಸಂಕ್ರಾಂತಿ ನಡುವೆ ದೊಡ್ಡ ರಾಜಕೀಯ ಅವಘಡ: ಕೋಡಿ ಮಠ ಶ್ರೀ ಭವಿಷ್ಯ!

ನವೆಂಬರ್ ನಿಂದ ಸಂಕ್ರಾಂತಿ ನಡುವೆ ದೊಡ್ಡ ರಾಜಕೀಯ ಅವಘಡ: ಕೋಡಿ ಮಠ ಶ್ರೀ ಭವಿಷ್ಯ!

spot_img
- Advertisement -
- Advertisement -

ಶಿರಸಿ: ರಾಜ್ಯದಲ್ಲಿ ಸದ್ಯ ಎದ್ದಿರುವ ರಾಜಕೀಯ ಗೊಂದಲ ಸುಖಾಂತ್ಯ ಕಾಣಲಿದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಶಿರಸಿ ತಾಲ್ಲೂಕಿನ ನೇರಲಕಟ್ಟೆ ಗ್ರಾಮದಲ್ಲಿರುವ ಭೂದೇವಿ ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವೇಳೆ ಮಾತನಾಡಿದ ಕೋಡಿ ಮಠದ ಸ್ವಾಮೀಜಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ಮಾತನಾಡುವ ಸ್ವಾತಂತ್ರ್ಯವಿದೆ. ಅದಕ್ಕೆ ಸ್ವಾಮೀಜಿಗಳು ಹೊರತಾಗಿಲ್ಲ’ ಎಂದು ಪರೋಕ್ಷವಾಗಿ ವೀರಶೈವ ಸ್ವಾಮೀಜಿಗಳ ನಡೆ ಸಮರ್ಥನೆ ಮಾಡಿಕೊಂಡಿದ್ದಾರೆ.

ಇದೇ ವೇಳೆ ನವೆಂಬರ್‌ನಿಂದ ಸಂಕ್ರಾಂತಿ ನಡುವೆ ದೇಶ ಮಟ್ಟದಲ್ಲಿ ದೊಡ್ಡ ರಾಜಕೀಯ ಅವಘಡ ಸಂಭವಿಸಲಿದೆ. ಅದು ಜಾಗತಿಕವಾಗಿ ತಲ್ಲಣ ಸೃಷ್ಟಿಸುತ್ತದೆ‌ ಎಂದಿರುವ ಕೋಡಿ ಶ್ರೀ, ಆಗಸ್ಟ್‌ ಮೂರನೇ ವಾರದಿಂದ ಕೋವಿಡ್ ಹಾವಳಿ ಹೆಚ್ಚಲಿದೆ, ಮಳೆ, ಗಾಳಿ ಅಧಿಕವಾಗಿ ಕೆರೆಕಟ್ಟೆಗಳು ಭರ್ತಿಯಾಗಿ, ಜಲಪ್ರಳಯ ಸಂಭವಿಸಲಿದೆ. ಪಂಚಭೂತಗಳಿಂದಲೂ ಈ ವರ್ಷ ಅನಾಹುತ ಸಂಭವಿಸಲಿದೆ ಎಂದು ಹೇಳಿದ್ದಾರೆ.

- Advertisement -
spot_img

Latest News

error: Content is protected !!