Thursday, May 2, 2024
Homeಕರಾವಳಿಬೆಳ್ತಂಗಡಿ ತಾಲೂಕಿನ ಹಲವು ಅಧಿಕಾರಿಗಳಿಗೆ ಮೇಜರ್ ಸರ್ಜರಿ:ವರ್ಗಾವಣೆಯಾಗಲಿರುವ ಅಧಿಕಾರಿಗಳ ವಿವರ ಇಲ್ಲಿದೆ..!

ಬೆಳ್ತಂಗಡಿ ತಾಲೂಕಿನ ಹಲವು ಅಧಿಕಾರಿಗಳಿಗೆ ಮೇಜರ್ ಸರ್ಜರಿ:ವರ್ಗಾವಣೆಯಾಗಲಿರುವ ಅಧಿಕಾರಿಗಳ ವಿವರ ಇಲ್ಲಿದೆ..!

spot_img
- Advertisement -
- Advertisement -

ಬೆಳ್ತಂಗಡಿ : ಹೊಸ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಬಿಜೆಪಿ ಸರಕಾರದ ಸಮಯದಲ್ಲಿ ಕರ್ತವ್ಯದಲ್ಲಿದ್ದ ಸರಕಾರಿ ಅಧಿಕಾರಿಗಳ ಸರ್ಜರಿಗೆ ಕಾಂಗ್ರೆಸ್ ಸರಕಾರ ಮುಂದಾಗಿದೆ‌.

ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ವಸಂತ ಬಂಗೇರ ಮತ್ತು ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಂ ನೇತೃತ್ವದಲ್ಲಿ  ಬೆಳ್ತಂಗಡಿ ತಾಲೂಕಿನ ಪೊಲೀಸ್ ಇಲಾಖೆ, ಅರಣ್ಯ ಇಲಾಖೆ , ಅಬಕಾರಿ ಇಲಾಖೆ , ಪಿಡಿಓ , ತಹಶೀಲ್ದಾರ್ ಸೇರಿದಂತೆ ಹಲವು ಅಧಿಕಾರಿಗಳ ಮೇಜರ್ ಸರ್ಜರಿ ಮಾಡಲು ಮುಂದಾಗಿದ್ದಾರೆ. ಅಧಿಕಾರಗಳ ವರ್ಗಾವಣೆ ಮಾಡಲು ಅಧಿಕಾರಿಗಳ ಲಿಸ್ಟ್ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನೀಡಿದ್ದು. ಕೆಲ ದಿನಗಳಲ್ಲಿ ವರ್ಗಾವಣೆ ಆದೇಶ ಬರಲಿದೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅಗಿದ್ದ ಸತ್ಯನಾರಾಯಣ ಚುನಾವಣಾ ಸಂಧರ್ಭದಲ್ಲಿ ಬಂದಿದ್ದು ಈಗ ಅವರು ಮತ್ತೆ ಹಿಂದಿನ ಠಾಣೆಗೆ ವರ್ಗಾವಣೆ ಅಗಿದ್ದು. ಖಾಲಿ ಇರುವ ಇನ್ಸ್‌ಪೆಕ್ಟರ್ ಕುರ್ಚಿಗೆ ಇನ್ಸ್‌ಪೆಕ್ಟರ್ ನಾಗೇಶ್ ಕದ್ರಿಯವರು ಕುರ್ಚಿ ಕಾಯ್ದಿರಿಸಿದ್ದು. ಸರ್ಕಲ್ ಇನ್ಸ್‌ಪೆಕ್ಟರ್ ಅಗಿರುವ ಶಿವಕುಮಾರ್ ಅವರನ್ನು ವರ್ಗಾವಣೆ ಮಾಡಿ ಖಾಲಿ ಅಗುವ ಕುರ್ಚಿಗೆ ಐಜಿಪಿ ಕಚೇರಿಯಲ್ಲಿರುವ ಇನ್ಸ್‌ಪೆಕ್ಟರ್ ಒಬ್ಬರು ಬರಲಿದ್ದಾರೆ. ತಹಶಿಲ್ದಾರ್ ಸುರೇಶ್ ಕುಮಾರ್ ಅವರನ್ನು ವರ್ಗಾವಣೆ ಮಾಡಿ ಖಾಲಿ ಇರುವ ಕುರ್ಚಿಗೆ ಹೊಸ ತಹಶೀಲ್ದಾರ್ ನೇಮಕವಾಗಲಿದ್ದಾರೆ.

ಅರಣ್ಯ ಇಲಾಖೆಯ ರೇಂಜರ್ ಅಗಿರುವ ತ್ಯಾಗರಾಜ್ ಅವರನ್ನು ವರ್ಗಾವಣೆ ಮಾಡಿ ಅವರ ಜಾಗಕ್ಕೆ ಸಂಧ್ಯಾ ಸಚಿನ್ ಅವರು ಬರಲಿದ್ದು. ಅಬಕಾರಿ ಇಲಾಖೆಯ ಇನ್ಸ್‌ಪೆಕ್ಟರ್ ನವೀನ್ ಕುಮಾರ್ ಅವರನ್ನು ವರ್ಗಾವಣೆ ಮಾಡಿ ಅವರ ಜಾಗಕ್ಕೆ ಇನ್ಸ್‌ಪೆಕ್ಟರ್ ಸೌಮ್ಯಲತಾ ಅವರು ನೇಮಕವಾಗಲಿದ್ದಾರೆ.

ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್.ಡಿ , ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸೌಮ್ಯ , ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅರ್ಜುನ್ ಅವರನ್ನು ವರ್ಗಾವಣೆ ಮಾಡಿ ಹೊಸ ಮುಖಗಳು ಕರ್ತವ್ಯಕ್ಕೆ ನೇಮಕವಾಗಲಿದ್ದಾರೆ.

- Advertisement -
spot_img

Latest News

error: Content is protected !!