Monday, May 13, 2024
Homeಕರಾವಳಿಉಡುಪಿಉಡುಪಿ: ಕಾಶ್ಮೀರಿ ಪಂಡಿತರ ರಕ್ಷಣೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಿ : ಕೇಂದ್ರ ಸರ್ಕಾರಕ್ಕೆ ಪೇಜಾವರ ಶ್ರೀಗಳ...

ಉಡುಪಿ: ಕಾಶ್ಮೀರಿ ಪಂಡಿತರ ರಕ್ಷಣೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಿ : ಕೇಂದ್ರ ಸರ್ಕಾರಕ್ಕೆ ಪೇಜಾವರ ಶ್ರೀಗಳ ಒತ್ತಾಯ

spot_img
- Advertisement -
- Advertisement -

ಉಡುಪಿ: ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆ ಮುಂದುವರೆದಿದ್ದು ಈ ಬಗ್ಗೆ ಪೇಜಾವರ ಶ್ರೀಗಳು ಕಳವಳ ವ್ಯಕ್ತಪಡಿಸಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಹಿಂದೂ ಹತ್ಯಾಕಾಂಡ ಮತ್ತೆ ಮುಂದುವರಿದಿರುವುದನ್ನು ಕಂಡು ತೀವ್ರ ಕಳವಳವಾಗಿದೆ ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರು ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಪೇಜಾವರ ಶ್ರೀಗಳು  ಇತ್ತೀಚೆಗೆ ಹಿಂದೂ ಸಹೋದರರ ಹತ್ಯೆ ನಡೆದಿದ್ದು ಅತ್ಯಂತ ಖಂಡನಾರ್ಹವಾಗಿದೆ.  ಸರ್ಕಾರ ಇಂಥ ಪೈಶಾಚಿಕ ಕೃತ್ಯ ಗಳಿಗೆ ಸಂಪೂರ್ಣ ವಿರಾಮ ಹಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಕಾಶ್ಮೀರಿ ಪಂಡಿತರ ರಕ್ಷಣೆಗೆ ಸೂಕ್ತ ವ್ಯವಸ್ಥೆ ಮಾಡಬೇಕು. ಪಂಡಿತರನ್ನು ತಕ್ಷಣ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

- Advertisement -
spot_img

Latest News

error: Content is protected !!