- Advertisement -
- Advertisement -
ಮಂಗಳೂರು: ಮಳಲಿ ಮಸೀದಿ ವಿಚಾರವಾಗಿ ಮಂಗಳೂರು ಕೋರ್ಟ್ ನಲ್ಲಿ ಇಂದು ವಿಚಾರಣೆ ಮುಂದುವರಿಯಲಿದೆ.
ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ನಲ್ಲಿ ವಿಚಾರಣೆ ಮುಂದುವರಿಯಲಿದ್ದು ಮಳಲಿ ಮಸೀದಿ ಆಡಳಿತ ಸಮಿತಿ ಪರ ವಕೀಲ ಎಂ.ಪಿ. ಶೆಣೈ ಮತ್ತು ವಿಶ್ವ ಹಿಂದೂ ಪರಿಷತ್ ಪರ ವಕೀಲ ಚಿದಾನಂದ ಕೆದಿಲಾಯ ವಾದ ಮಂಡಿಸಲಿದ್ದಾರೆ.
ಜೂನ್10 ರಂದು ಸುದೀರ್ಘ ವಾದ ಆಲಿಸಿದ್ದ ಕೋರ್ಟ್ ಇಂದಿಗೆ ವಿಚಾರಣೆ ಮುಂದೂಡಿತ್ತು.
ಈ ಮಧ್ಯೆ ನಿನ್ನೆ ಹೈಕೋರ್ಟ್ ಸೂಚನೆ ನೀಡಿರುವ ಹಿನ್ನಲೆಯಲ್ಲಿ ಇಂದು ಕೋರ್ಟ್ ವಿಚಾರಣೆ ಕುತೂಹಲ ಕೆರಳಿಸಿದೆ.
- Advertisement -