- Advertisement -
- Advertisement -
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಹೆಚ್.ಜಿ. ಶ್ರೀಧರ ಅವರಿಗೆ ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ ಲಭಿಸಿದೆ. ಕಲಬುರಗಿಯ ಪ್ರೊ. ಮಲ್ಲೇಪುರಂ ಸಾಂಸ್ಕೃತಿಕ ಪ್ರತಿಷ್ಠಾನ ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ ನೀಡುತ್ತಿದೆ.
2021ನೇ ಸಾಲಿನ ಪ್ರಶಸ್ತಿಗೆ ಆಯ್ಕೆಯಾಗಿರುವ ಡಾ. ಹೆಚ್.ಜಿ. ಶ್ರೀಧರ ಅವರು ಹಿರಿಯ ಸಾಹಿತಿಯಾಗಿದ್ದು, ಕನ್ನಡ ಪ್ರಾಧ್ಯಾಪಕರಾಗಿ ಪ್ರಸ್ತುತ ವಿವೇಕಾನಂದ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
- Advertisement -