Thursday, June 4, 2026
Homeಕರಾವಳಿಉಡುಪಿಪುತ್ತೂರು: ಅಡಿಕೆ ಕದ್ದ ಪ್ರಕರಣ; ಮೂರು ವರ್ಷಗಳಿಂದ ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಪುತ್ತೂರು: ಅಡಿಕೆ ಕದ್ದ ಪ್ರಕರಣ; ಮೂರು ವರ್ಷಗಳಿಂದ ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

- Advertisement -
- Advertisement -

ಪುತ್ತೂರು: ಐದು ವರ್ಷಗಳ ಹಿಂದೆ ಕೋಡಿಂಬಾಡಿಯಲ್ಲಿ ಅಡಿಕೆ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 3 ವರ್ಷಗಳಿಂದ ಕೋರ್ಟ್ ನಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.

ಉಡುಪಿ ಜಿಲ್ಲೆಯ ಮಂದಾರ್ತಿ ಕಡೂರ್‌ ಬಾಯರುಬೆಟ್ಟು ನಿವಾಸಿ ವಿಜಯ ಶೆಟ್ಟಿ ಬಂಧಿತ ಆರೋಪಿ. ಆತ 2018ರಲ್ಲಿ ಕೋಡಿಂಬಾಡಿಯಲ್ಲಿ ಅಡಿಕೆ ಕದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿ ಅನಂತರ ಜಾಮೀನಲ್ಲಿ ಬಿಡುಗಡೆಗೊಂಡು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಇದೀಗ ಪೊಲೀಸರು ಆತನನ್ನು ಬಂಧಿಸಿದ್ದಾರೆ.

- Advertisement -

Latest News

error: Content is protected !!